ಅವರೆಲ್ಲರೂ ಮನೆಯಿಂದ ಖುಷಿ ಖುಷಿಯಾಗಿ ಸಂಬಂಧಿಕರ ನಾಮಕರಣಕ್ಕೆ ಎಂದು ಹೊರಟಿದ್ದರು. ಇನ್ನೇನು ಕೆಲವೇ ನಿಮಿಷದಲ್ಲಿ ನಾಮಕರಣದಲ್ಲಿ ಭಾಗಿ ಆಗುತ್ತೇವೆ ಎಂದು ಕೊಂಡವರು, ಸೇರಿದ್ದ ಸ್ಮಶಾನಕ್ಕೆ. ಒಂದೇ ಕುಟುಂಬದ ಮೂವರ ಬಾಳಲ್ಲಿ ಇಂದು ವಿಧಿ ಆಟವಾಡಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ……
ಹೌದು ಹೀಗೆ ನಜ್ಜುಗುಜ್ಜಾದ ಕಾರು, ಸ್ಥಳ ಪರಿಶೀಲನೆಗೆ ಮುಂದಾಗಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ನೆಲಮಂಗಲ ಸಮೀಪದ ಡಾಬಸ್ ಪೇಟೆ ಬಳಿ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಗೋಪಾಲ್(60) ಶಶಿಕಲಾ(55) ದೀಪಿಕಾ (35) ಸಾವನಪ್ಪಿದ್ದಾರೆ. ಶಶಿಕಲಾ ಮುಂಬದಿಯ ಸೀಟ್ ನಲ್ಲಿ ಕುಳಿತ್ತಿದ್ದರು, ಅವರ ಹಿಂಭಾಗದಲ್ಲಿ ದೀಪಿಕಾ ಕುಳಿತಿದ್ದರಿಂದ ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗಾಯಾಳು ಚಾಲಕ ಗೋಪಾಲ್ ರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಆತ ಕೂಡ ಸಾವನಪ್ಪಿದ್ದಾನೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳಿದ್ದು, ಇಬ್ಬರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಆಗಿದ್ದರಿಂದ ಕಾರಿನ ವೇಗ ಕೂಡ ಹೆಚ್ಚಾಗಿತ್ತು. ಕಾರಿನ ರಭಸಕ್ಕೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಒಟ್ಟಾರೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಶುಭ ಕಾರ್ಯದಲ್ಲಿ ಭಾಗಿಯಾಗುತ್ತೇನೆ ಎಂದುಕೊಂಡಿದ್ದವರು, ಈಗ ಹೆಣವಾಗಿ ಸ್ಮಶಾನ ಸೇರಿದ್ದು ಮಾತ್ರ ವಿಧಿಯಾಟ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…