ಅವರೆಲ್ಲರೂ ಮನೆಯಿಂದ ಖುಷಿ ಖುಷಿಯಾಗಿ ಸಂಬಂಧಿಕರ ನಾಮಕರಣಕ್ಕೆ ಎಂದು ಹೊರಟಿದ್ದರು. ಇನ್ನೇನು ಕೆಲವೇ ನಿಮಿಷದಲ್ಲಿ ನಾಮಕರಣದಲ್ಲಿ ಭಾಗಿ ಆಗುತ್ತೇವೆ ಎಂದು ಕೊಂಡವರು, ಸೇರಿದ್ದ ಸ್ಮಶಾನಕ್ಕೆ. ಒಂದೇ ಕುಟುಂಬದ ಮೂವರ ಬಾಳಲ್ಲಿ ಇಂದು ವಿಧಿ ಆಟವಾಡಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ……
ಹೌದು ಹೀಗೆ ನಜ್ಜುಗುಜ್ಜಾದ ಕಾರು, ಸ್ಥಳ ಪರಿಶೀಲನೆಗೆ ಮುಂದಾಗಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ನೆಲಮಂಗಲ ಸಮೀಪದ ಡಾಬಸ್ ಪೇಟೆ ಬಳಿ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಗೋಪಾಲ್(60) ಶಶಿಕಲಾ(55) ದೀಪಿಕಾ (35) ಸಾವನಪ್ಪಿದ್ದಾರೆ. ಶಶಿಕಲಾ ಮುಂಬದಿಯ ಸೀಟ್ ನಲ್ಲಿ ಕುಳಿತ್ತಿದ್ದರು, ಅವರ ಹಿಂಭಾಗದಲ್ಲಿ ದೀಪಿಕಾ ಕುಳಿತಿದ್ದರಿಂದ ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗಾಯಾಳು ಚಾಲಕ ಗೋಪಾಲ್ ರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಆತ ಕೂಡ ಸಾವನಪ್ಪಿದ್ದಾನೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳಿದ್ದು, ಇಬ್ಬರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಆಗಿದ್ದರಿಂದ ಕಾರಿನ ವೇಗ ಕೂಡ ಹೆಚ್ಚಾಗಿತ್ತು. ಕಾರಿನ ರಭಸಕ್ಕೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಒಟ್ಟಾರೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಶುಭ ಕಾರ್ಯದಲ್ಲಿ ಭಾಗಿಯಾಗುತ್ತೇನೆ ಎಂದುಕೊಂಡಿದ್ದವರು, ಈಗ ಹೆಣವಾಗಿ ಸ್ಮಶಾನ ಸೇರಿದ್ದು ಮಾತ್ರ ವಿಧಿಯಾಟ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…