ವಿಧಿಯಾಟ: ಹೊರಟಿದ್ದು ನಾಮಕರಣ‌ ಕಾರ್ಯಕ್ರಮಕ್ಕೆ, ತಲುಪಿದ್ದು ಮಸಣ‌: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರ ದುರ್ಮರಣ

ಅವರೆಲ್ಲರೂ ಮನೆಯಿಂದ ಖುಷಿ ಖುಷಿಯಾಗಿ ಸಂಬಂಧಿಕರ ನಾಮಕರಣಕ್ಕೆ ಎಂದು ಹೊರಟಿದ್ದರು. ಇನ್ನೇನು ಕೆಲವೇ ನಿಮಿಷದಲ್ಲಿ ನಾಮಕರಣದಲ್ಲಿ ಭಾಗಿ ಆಗುತ್ತೇವೆ ಎಂದು ಕೊಂಡವರು, ಸೇರಿದ್ದ ಸ್ಮಶಾನಕ್ಕೆ. ಒಂದೇ ಕುಟುಂಬದ ಮೂವರ ಬಾಳಲ್ಲಿ ಇಂದು ವಿಧಿ ಆಟವಾಡಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ……

ಹೌದು ಹೀಗೆ ನಜ್ಜುಗುಜ್ಜಾದ ಕಾರು, ಸ್ಥಳ ಪರಿಶೀಲನೆಗೆ ಮುಂದಾಗಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ನೆಲಮಂಗಲ ಸಮೀಪದ ಡಾಬಸ್ ಪೇಟೆ ಬಳಿ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಗೋಪಾಲ್(60) ಶಶಿಕಲಾ(55) ದೀಪಿಕಾ (35)  ಸಾವನಪ್ಪಿದ್ದಾರೆ.  ಶಶಿಕಲಾ ಮುಂಬದಿಯ ಸೀಟ್ ನಲ್ಲಿ ಕುಳಿತ್ತಿದ್ದರು, ಅವರ ಹಿಂಭಾಗದಲ್ಲಿ ದೀಪಿಕಾ ಕುಳಿತಿದ್ದರಿಂದ ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗಾಯಾಳು ಚಾಲಕ ಗೋಪಾಲ್ ರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಆತ‌ ಕೂಡ ಸಾವನಪ್ಪಿದ್ದಾನೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳಿದ್ದು, ಇಬ್ಬರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೂ ಗೋಪಾಲ್ ಕುಟುಂಬ ತುಮಕೂರಿನ ಸಂಬಂಧಿಕರ ಮನೆಯಲ್ಲಿ ನಾಮಕರಣಕ್ಕಾಗಿ, ಬೆಂಗಳೂರಿನ ಮಲ್ಲೇಶ್ವರಂ ನಿಂದ ಹೊರಟು ನೆಲಮಂಗಲದ ದಾಬಸ್ ಪೇಟೆ ಬಳಿ ಸಾವನಪ್ಪಿದ್ದಾರೆ. ಬೆಂಗಳೂರಿನಿಂದ ತುಮಕೂರಿನ ಕಡೆಗೆ ಪ್ರಯಾಣ ಬೆಳೆಸುತ್ತಿದ್ದ ಲಾರಿಯೊಂದು ಮುಂದೆ ಚಮಕ್ ನೀಡಿದೆ‌. ಹೀಗಾಗಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ‌.

ರಾಷ್ಟ್ರೀಯ ಹೆದ್ದಾರಿ ಆಗಿದ್ದರಿಂದ ಕಾರಿನ ವೇಗ ಕೂಡ ಹೆಚ್ಚಾಗಿತ್ತು. ಕಾರಿನ ರಭಸಕ್ಕೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ನೆಲಮಂಗಲ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಒಟ್ಟಾರೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಶುಭ ಕಾರ್ಯದಲ್ಲಿ ಭಾಗಿಯಾಗುತ್ತೇನೆ ಎಂದುಕೊಂಡಿದ್ದವರು, ಈಗ ಹೆಣವಾಗಿ ಸ್ಮಶಾನ ಸೇರಿದ್ದು ಮಾತ್ರ ವಿಧಿಯಾಟ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

6 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago