ವಿನಯ್‌ ಆತ್ಮಹತ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಸಚಿವ ಕೆ.ಜೆ ಜಾರ್ಜ್‌

ಕೊಡಗು ಜಿಲ್ಲೆಯ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಒಂದು ದುರಂತ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಯಾರದ್ದೇ ತಪ್ಪಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಅವರ ಸಾವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ”, ಎಂದರು.

“ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ನಾಯಕರ ಒತ್ತಾಯ ರಾಜಕೀಯವಲ್ಲವೇ? ಯಾರ ಮೇಲೆ ತನಿಖೆ ಮಾಡಬೇಕು ಎಂಬುದು ಪೊಲೀಸರಿಗೆ ಗೊತ್ತು. ಅವರು ತನಿಖೆ ಮಾಡುತ್ತಾರೆ. ಅದಕ್ಕೆ ಸಹಕರಿಸಬೇಕು”, ಎಂದರು.

ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರೊಂದಿಗೆ ವಿನಯ್ ಸೋಮಯ್ಯ ಸಂಪರ್ಕದಲ್ಲಿದ್ದರೇ ಎಂದು ಪ್ರಶ್ನಿಸಿದ ಅವರು, “ವಿನಯ್ ಸೋಮಯ್ಯ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಗುತ್ತಿತ್ತು. ಈ ವಿಚಾರದಲ್ಲಿ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ”, ಎಂದು ಹೇಳಿದರು.

“ಈ ಪ್ರಕರಣದ ಬಗ್ಗೆ ತನಿಖೆಯಾಗಿ ಸತ್ಯ ಹೊರಬರಲಿ. ಆದರೆ, ಕೆ.ಜಿ. ಬೋಪಯ್ಯ ಅವರನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ್ದರಿಂದ ಎ.ಎಸ್.ಪೊನ್ನಣ್ಣ ಮೇಲೆ ಬಿಜೆಪಿಯವರಿಗೆ ಸಿಟ್ಟು ಇದೆ. ಅದನ್ನು ಈ ರೀತಿ ತೋರಿಸುತ್ತಿದ್ದಾರೆ”, ಎಂದು ಆರೋಪಿಸಿದ ಸಚಿವ ಕೆ.ಜೆ.ಜಾರ್ಜ್, ಹೆಣದ ಮಲೆ ರಾಜಕೀಯ ಮಾಡುವುದನ್ನು ಬಿಟ್ಟು ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲಿ. ಅಷ್ಟೂ ತಾಳ್ಮೆ ಬಿಜೆಪಿಯವರಿಗೆ ಇಲ್ಲವೇ ಎಂದು ಪ್ರಆಶ್ನಿಸಿದರು.

“ಹಿಂದೆ ಡಿವೈಎಸ್ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ನನ್ನ ತಲೆಗೆ ಕಟ್ಟಲು ಇದೇ ಬಿಜೆಪಿಯವರು ಯತ್ನಿಸಿದ್ದರು. ವಿನಾ ಕಾರಣ ಆರೋಪ ಮಾಡಿದ್ದರಿಂದ ನನ್ನ ಕುಟುಂಬದವರು ಮಾನಸಿಕವಾಗಿ ನೋವು ಅನುಭವಿಸಿದ್ದರು. ಯಾರ ಮೇಲೂ ಈ ರೀತಿಯ ರಾಜಕೀಯ ಪ್ರೇರಿತ ಆರೋಪ ಮಾಡಬಾರದು”, ಎಂದು ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದರು.

Ramesh Babu

Journalist

Recent Posts

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

29 seconds ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

7 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

8 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

8 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

9 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

20 hours ago