ವಿನಯ್‌ ಆತ್ಮಹತ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಸಚಿವ ಕೆ.ಜೆ ಜಾರ್ಜ್‌

ಕೊಡಗು ಜಿಲ್ಲೆಯ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಒಂದು ದುರಂತ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಯಾರದ್ದೇ ತಪ್ಪಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಅವರ ಸಾವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ”, ಎಂದರು.

“ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ನಾಯಕರ ಒತ್ತಾಯ ರಾಜಕೀಯವಲ್ಲವೇ? ಯಾರ ಮೇಲೆ ತನಿಖೆ ಮಾಡಬೇಕು ಎಂಬುದು ಪೊಲೀಸರಿಗೆ ಗೊತ್ತು. ಅವರು ತನಿಖೆ ಮಾಡುತ್ತಾರೆ. ಅದಕ್ಕೆ ಸಹಕರಿಸಬೇಕು”, ಎಂದರು.

ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರೊಂದಿಗೆ ವಿನಯ್ ಸೋಮಯ್ಯ ಸಂಪರ್ಕದಲ್ಲಿದ್ದರೇ ಎಂದು ಪ್ರಶ್ನಿಸಿದ ಅವರು, “ವಿನಯ್ ಸೋಮಯ್ಯ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಗುತ್ತಿತ್ತು. ಈ ವಿಚಾರದಲ್ಲಿ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ”, ಎಂದು ಹೇಳಿದರು.

“ಈ ಪ್ರಕರಣದ ಬಗ್ಗೆ ತನಿಖೆಯಾಗಿ ಸತ್ಯ ಹೊರಬರಲಿ. ಆದರೆ, ಕೆ.ಜಿ. ಬೋಪಯ್ಯ ಅವರನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ್ದರಿಂದ ಎ.ಎಸ್.ಪೊನ್ನಣ್ಣ ಮೇಲೆ ಬಿಜೆಪಿಯವರಿಗೆ ಸಿಟ್ಟು ಇದೆ. ಅದನ್ನು ಈ ರೀತಿ ತೋರಿಸುತ್ತಿದ್ದಾರೆ”, ಎಂದು ಆರೋಪಿಸಿದ ಸಚಿವ ಕೆ.ಜೆ.ಜಾರ್ಜ್, ಹೆಣದ ಮಲೆ ರಾಜಕೀಯ ಮಾಡುವುದನ್ನು ಬಿಟ್ಟು ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲಿ. ಅಷ್ಟೂ ತಾಳ್ಮೆ ಬಿಜೆಪಿಯವರಿಗೆ ಇಲ್ಲವೇ ಎಂದು ಪ್ರಆಶ್ನಿಸಿದರು.

“ಹಿಂದೆ ಡಿವೈಎಸ್ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ನನ್ನ ತಲೆಗೆ ಕಟ್ಟಲು ಇದೇ ಬಿಜೆಪಿಯವರು ಯತ್ನಿಸಿದ್ದರು. ವಿನಾ ಕಾರಣ ಆರೋಪ ಮಾಡಿದ್ದರಿಂದ ನನ್ನ ಕುಟುಂಬದವರು ಮಾನಸಿಕವಾಗಿ ನೋವು ಅನುಭವಿಸಿದ್ದರು. ಯಾರ ಮೇಲೂ ಈ ರೀತಿಯ ರಾಜಕೀಯ ಪ್ರೇರಿತ ಆರೋಪ ಮಾಡಬಾರದು”, ಎಂದು ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

58 minutes ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

22 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago