ವಿನಯ್‌ ಆತ್ಮಹತ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಸಚಿವ ಕೆ.ಜೆ ಜಾರ್ಜ್‌

ಕೊಡಗು ಜಿಲ್ಲೆಯ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಒಂದು ದುರಂತ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಯಾರದ್ದೇ ತಪ್ಪಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಅವರ ಸಾವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ”, ಎಂದರು.

“ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ನಾಯಕರ ಒತ್ತಾಯ ರಾಜಕೀಯವಲ್ಲವೇ? ಯಾರ ಮೇಲೆ ತನಿಖೆ ಮಾಡಬೇಕು ಎಂಬುದು ಪೊಲೀಸರಿಗೆ ಗೊತ್ತು. ಅವರು ತನಿಖೆ ಮಾಡುತ್ತಾರೆ. ಅದಕ್ಕೆ ಸಹಕರಿಸಬೇಕು”, ಎಂದರು.

ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರೊಂದಿಗೆ ವಿನಯ್ ಸೋಮಯ್ಯ ಸಂಪರ್ಕದಲ್ಲಿದ್ದರೇ ಎಂದು ಪ್ರಶ್ನಿಸಿದ ಅವರು, “ವಿನಯ್ ಸೋಮಯ್ಯ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಗುತ್ತಿತ್ತು. ಈ ವಿಚಾರದಲ್ಲಿ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ”, ಎಂದು ಹೇಳಿದರು.

“ಈ ಪ್ರಕರಣದ ಬಗ್ಗೆ ತನಿಖೆಯಾಗಿ ಸತ್ಯ ಹೊರಬರಲಿ. ಆದರೆ, ಕೆ.ಜಿ. ಬೋಪಯ್ಯ ಅವರನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ್ದರಿಂದ ಎ.ಎಸ್.ಪೊನ್ನಣ್ಣ ಮೇಲೆ ಬಿಜೆಪಿಯವರಿಗೆ ಸಿಟ್ಟು ಇದೆ. ಅದನ್ನು ಈ ರೀತಿ ತೋರಿಸುತ್ತಿದ್ದಾರೆ”, ಎಂದು ಆರೋಪಿಸಿದ ಸಚಿವ ಕೆ.ಜೆ.ಜಾರ್ಜ್, ಹೆಣದ ಮಲೆ ರಾಜಕೀಯ ಮಾಡುವುದನ್ನು ಬಿಟ್ಟು ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲಿ. ಅಷ್ಟೂ ತಾಳ್ಮೆ ಬಿಜೆಪಿಯವರಿಗೆ ಇಲ್ಲವೇ ಎಂದು ಪ್ರಆಶ್ನಿಸಿದರು.

“ಹಿಂದೆ ಡಿವೈಎಸ್ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ನನ್ನ ತಲೆಗೆ ಕಟ್ಟಲು ಇದೇ ಬಿಜೆಪಿಯವರು ಯತ್ನಿಸಿದ್ದರು. ವಿನಾ ಕಾರಣ ಆರೋಪ ಮಾಡಿದ್ದರಿಂದ ನನ್ನ ಕುಟುಂಬದವರು ಮಾನಸಿಕವಾಗಿ ನೋವು ಅನುಭವಿಸಿದ್ದರು. ಯಾರ ಮೇಲೂ ಈ ರೀತಿಯ ರಾಜಕೀಯ ಪ್ರೇರಿತ ಆರೋಪ ಮಾಡಬಾರದು”, ಎಂದು ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದರು.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

38 minutes ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

11 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

22 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

23 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

23 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago