Categories: ರಾಜ್ಯ

ವಿಪಕ್ಷಗಳ ಒಕ್ಕೂಟಕ್ಕೆ INDIA ಎಂದು ನಾಮಕರಣ: ಸಮೃದ್ಧ ಭಾರತದಲ್ಲಿ ಇಂಡಿಯಾ ಹೆಸರಲ್ಲಿ ಖದೀಮ ಕಂಪನಿಗಳು ಹುಟ್ಟುತ್ತವೆ: ಭಾರತವನ್ನು ಕೊಳ್ಳೆ ಹೊಡೆಯಲು ಇಟಲಿ ಈಸ್ಟ್ ಇಂಡಿಯಾ ಕಂಪನಿ ಘೋಷಣೆ- ಬಿಜೆಪಿ ಆಕ್ರೋಶ

2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಧ್ಯೇಯದೊಂದಿಗೆ ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ.

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಡೆಯುತ್ತಿದೆ. ಈ ಬಗ್ಗೆ ಸಭೆಯಲ್ಲಿ ಭಾಗಿಯಾಗಿರುವ ನಾಯಕರಿಂದ ಗಂಭೀರ ಚರ್ಚೆ ನಡೆದ ಬಳಿಕ. ಇಂಡಿಯಾ ಹೆಸರಿಗೆ ಮೈತ್ರಿಕೂಟ ನಾಯಕರ ಒಪ್ಪಿಗೆ ಸೂಚಿಸಿದ ಬಳಿಕ ಇಂಡಿಯಾ ಎಂದು ಘೋಷಣೆ.

ವಿಪಕ್ಷಗಳ ಒಕ್ಕೂಟಕ್ಕೆ INDIA ಎಂದು ನಾಮಕರಣ ಆದ ಕೂಡಲೇ ಬಿಜೆಪಿ ಮೈತ್ರಿ ಒಕ್ಕೂಟದ ವಿರುದ್ಧ ಕಿಡಿಕಾರಿದೆ. ಭಾರತ ಸಮೃದ್ಧವಾದಾಗಲೆಲ್ಲಾ INDIA ಹೆಸರಿನಲ್ಲಿ ಖದೀಮ ಕಂಪನಿಗಳು ಹುಟ್ಟಿಕೊಳ್ಳುತ್ತವೆ ಎಂದು ಲೇವಡಿ ಮಾಡಿರೋ ಬಿಜೆಪಿ

ಅಂದು ಬ್ರಿಟಿಷ್‌ ಈಸ್ಟ್‌ INDIA ಕಂಪನಿ ಸ್ಥಾಪಿತವಾಗಿ ಭಾರತದ ತುಂಡರಸರನ್ನೆಲ್ಲಾ ಸೇರಿಸಿ ದೇಶವನ್ನು ಕೊಳ್ಳೆ ಹೊಡೆಯಿತು. ಇಂದು ಮತ್ತೊಮ್ಮೆ ಸಮೃದ್ಧ ಭಾರತವನ್ನು ಕೊಳ್ಳೆ ಹೊಡೆಯಲು ಹೊಂಚಾಕಿ ಇಟಲಿ ಈಸ್ಟ್‌ INDIA ಕಂಪನಿಯ ಘೋಷಣೆಯಾಗಿದೆ. ಆದರೆ ಈ ಕಂಪನಿ ಸದ್ಯದಲ್ಲೇ ಬರ್ಕಾಸ್ತಾಗಲಿರುವುದು ನಿಶ್ಚಿತ ಎಂದು ಭವಿಷ್ಯ ನುಡಿಗಳನ್ನಾಡಿದೆ.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

12 minutes ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

1 hour ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

9 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

14 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago