Categories: ರಾಜ್ಯ

ವಿಪಕ್ಷಗಳ ಒಕ್ಕೂಟಕ್ಕೆ INDIA ಎಂದು ನಾಮಕರಣ: ಸಮೃದ್ಧ ಭಾರತದಲ್ಲಿ ಇಂಡಿಯಾ ಹೆಸರಲ್ಲಿ ಖದೀಮ ಕಂಪನಿಗಳು ಹುಟ್ಟುತ್ತವೆ: ಭಾರತವನ್ನು ಕೊಳ್ಳೆ ಹೊಡೆಯಲು ಇಟಲಿ ಈಸ್ಟ್ ಇಂಡಿಯಾ ಕಂಪನಿ ಘೋಷಣೆ- ಬಿಜೆಪಿ ಆಕ್ರೋಶ

2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಧ್ಯೇಯದೊಂದಿಗೆ ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ.

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಡೆಯುತ್ತಿದೆ. ಈ ಬಗ್ಗೆ ಸಭೆಯಲ್ಲಿ ಭಾಗಿಯಾಗಿರುವ ನಾಯಕರಿಂದ ಗಂಭೀರ ಚರ್ಚೆ ನಡೆದ ಬಳಿಕ. ಇಂಡಿಯಾ ಹೆಸರಿಗೆ ಮೈತ್ರಿಕೂಟ ನಾಯಕರ ಒಪ್ಪಿಗೆ ಸೂಚಿಸಿದ ಬಳಿಕ ಇಂಡಿಯಾ ಎಂದು ಘೋಷಣೆ.

ವಿಪಕ್ಷಗಳ ಒಕ್ಕೂಟಕ್ಕೆ INDIA ಎಂದು ನಾಮಕರಣ ಆದ ಕೂಡಲೇ ಬಿಜೆಪಿ ಮೈತ್ರಿ ಒಕ್ಕೂಟದ ವಿರುದ್ಧ ಕಿಡಿಕಾರಿದೆ. ಭಾರತ ಸಮೃದ್ಧವಾದಾಗಲೆಲ್ಲಾ INDIA ಹೆಸರಿನಲ್ಲಿ ಖದೀಮ ಕಂಪನಿಗಳು ಹುಟ್ಟಿಕೊಳ್ಳುತ್ತವೆ ಎಂದು ಲೇವಡಿ ಮಾಡಿರೋ ಬಿಜೆಪಿ

ಅಂದು ಬ್ರಿಟಿಷ್‌ ಈಸ್ಟ್‌ INDIA ಕಂಪನಿ ಸ್ಥಾಪಿತವಾಗಿ ಭಾರತದ ತುಂಡರಸರನ್ನೆಲ್ಲಾ ಸೇರಿಸಿ ದೇಶವನ್ನು ಕೊಳ್ಳೆ ಹೊಡೆಯಿತು. ಇಂದು ಮತ್ತೊಮ್ಮೆ ಸಮೃದ್ಧ ಭಾರತವನ್ನು ಕೊಳ್ಳೆ ಹೊಡೆಯಲು ಹೊಂಚಾಕಿ ಇಟಲಿ ಈಸ್ಟ್‌ INDIA ಕಂಪನಿಯ ಘೋಷಣೆಯಾಗಿದೆ. ಆದರೆ ಈ ಕಂಪನಿ ಸದ್ಯದಲ್ಲೇ ಬರ್ಕಾಸ್ತಾಗಲಿರುವುದು ನಿಶ್ಚಿತ ಎಂದು ಭವಿಷ್ಯ ನುಡಿಗಳನ್ನಾಡಿದೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

7 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

8 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

10 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

10 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

20 hours ago