ರಾಜ್ಯದಲ್ಲಿ ಮೇ.20ರಂದು ಸಿಎಂ ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳುಗಳು ಕಳೆದಿವೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. 16ನೇ ವಿಧಾನಸಭೆಯ ಮೊದಲ ಜಂಟಿ ಅಧಿವೇಶನದ ಆರಂಭಕ್ಕೆ ಒಂದೇ ದಿನ ಬಾಕಿ ಇದ್ದರೂ, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಯಾರನ್ನೂ ಆಯ್ಕೆ ಮಾಡದೇ ಕೈಕಟ್ಟಿ ಕುಳಿತಿರುವ ಬಿಜೆಪಿ.
ವಿಪಕ್ಷ ನಾಯಕ ಸ್ಥಾನಕ್ಕೆ ಯಾವೊಬ್ಬ ನಾಯಕನ ಹೆಸರನ್ನು ಸೂಚಿಸಿದೆ ವಿಳಂಬ ಮಾಡುತ್ತಿರೋ ಬಿಜೆಪಿ ನಡೆಯನ್ನ ಖಂಡಿಸುತ್ತಿರುವ ಕರ್ನಾಟಕ ಕಾಂಗ್ರೆಸ್.
ವಿಪಕ್ಷ ನಾಯಕರ ಹುದ್ದೆಗೆ ಟವಲ್ ಹಾಕಿರುವ ‘ಸಂತೋಷ ಕೂಟ’ದ ಕೈಗೊಂಬೆ ಬಸನಗೌಡ ಪಾಟೀಲ್ ಯತ್ನಾಳ್ ಆಸೆ ಕೇಂದ್ರ ನಾಯಕರು ಈಡೇರಿಸುತ್ತಾರಾ? ಈಡೇರಿಸಿದರೂ, ನಮ್ಮ ಸಿಎಂ ಮುಂದೆ ಗರ್ಜಿಸಲು ಸಶಕ್ತರಾ? ಎಂದು ಪ್ರಶ್ನೆ ಮಾಡಿರೋ ಕಾಂಗ್ರೆಸ್.
ನಿಮ್ಮ ಆಂತರಿಕ ಕಲಹ, ವೈಮನಸ್ಸು, ಭಿನ್ನಾಭಿಪ್ರಾಯ ಏನೇ ಇರಲಿ. ಮೊದಲಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ. ಸಂವಿಧಾನದಲ್ಲಿ ವಿರೋಧ ಪಕ್ಷದ ನಾಯಕನಿಗೆ ಮಹತ್ವವಿದೆ. ನಿಮ್ಮ ಬಣಗಳ ಗುದ್ದಾಟದಲ್ಲಿ ವಿಪಕ್ಷ ನಾಯಕನಿಗಿರುವ ಮಹತ್ವವನ್ನು ಕಳೆಯಬೇಡಿ. ಬಿಜೆಪಿಗೆ ಇನ್ನೂ ಸಹ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದರೆ ಭಾರಿ ಚೌಕಾಶಿ ವ್ಯವಹಾರ ನಡೆಯುತ್ತಿದೆ ಎಂದೇ ಅರ್ಥ ಎಂದು ಆರೋಪಿಸಿದ ಕಾಂಗ್ರೆಸ್.
ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಆಗಿತ್ತು?, ವಿಪಕ್ಷ ನಾಯಕನ ಹುದ್ದೆಯನ್ನೂ ಮಾರಾಟಕ್ಕಿಡಲಾಗಿದೆಯೇ? ವಿಪಕ್ಷ ನಾಯಕನ ಹುದ್ದೆಗೆಷ್ಟು? ಪಕ್ಷದ ಅಧ್ಯಕ್ಷ ಹುದ್ದೆಗೆಷ್ಟು? ಇದಕ್ಕೆಲ್ಲಾ ಅಮಿತ್ ಶಾ ಉತ್ತರಿಸಬೇಕು! ಎಂದು ಆಗ್ರಹಿಸಿರೋ ಕಾಂಗ್ರೆಸ್
ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ನಾಯಕರೇ ಇಲ್ಲದ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ! ಎಂದು ಕಿಡಿಕಾರಿದ ಕಾಂಗ್ರೆಸ್
ಬಿಜೆಪಿ ಪಕ್ಷ ಆಡಳಿತ ಮಾಡಲು ಅಸಮರ್ಥರು ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ಅಸಮರ್ಥರು ಎಂದು ತಿಳಿಯುತ್ತಿದೆ ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ ಎಂದ ಕಾಂಗ್ರೆಸ್.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…