ರಾಜ್ಯದಲ್ಲಿ ಮೇ.20ರಂದು ಸಿಎಂ ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳುಗಳು ಕಳೆದಿವೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. 16ನೇ ವಿಧಾನಸಭೆಯ ಮೊದಲ ಜಂಟಿ ಅಧಿವೇಶನದ ಆರಂಭಕ್ಕೆ ಒಂದೇ ದಿನ ಬಾಕಿ ಇದ್ದರೂ, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಯಾರನ್ನೂ ಆಯ್ಕೆ ಮಾಡದೇ ಕೈಕಟ್ಟಿ ಕುಳಿತಿರುವ ಬಿಜೆಪಿ.
ವಿಪಕ್ಷ ನಾಯಕ ಸ್ಥಾನಕ್ಕೆ ಯಾವೊಬ್ಬ ನಾಯಕನ ಹೆಸರನ್ನು ಸೂಚಿಸಿದೆ ವಿಳಂಬ ಮಾಡುತ್ತಿರೋ ಬಿಜೆಪಿ ನಡೆಯನ್ನ ಖಂಡಿಸುತ್ತಿರುವ ಕರ್ನಾಟಕ ಕಾಂಗ್ರೆಸ್.
ವಿಪಕ್ಷ ನಾಯಕರ ಹುದ್ದೆಗೆ ಟವಲ್ ಹಾಕಿರುವ ‘ಸಂತೋಷ ಕೂಟ’ದ ಕೈಗೊಂಬೆ ಬಸನಗೌಡ ಪಾಟೀಲ್ ಯತ್ನಾಳ್ ಆಸೆ ಕೇಂದ್ರ ನಾಯಕರು ಈಡೇರಿಸುತ್ತಾರಾ? ಈಡೇರಿಸಿದರೂ, ನಮ್ಮ ಸಿಎಂ ಮುಂದೆ ಗರ್ಜಿಸಲು ಸಶಕ್ತರಾ? ಎಂದು ಪ್ರಶ್ನೆ ಮಾಡಿರೋ ಕಾಂಗ್ರೆಸ್.
ನಿಮ್ಮ ಆಂತರಿಕ ಕಲಹ, ವೈಮನಸ್ಸು, ಭಿನ್ನಾಭಿಪ್ರಾಯ ಏನೇ ಇರಲಿ. ಮೊದಲಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ. ಸಂವಿಧಾನದಲ್ಲಿ ವಿರೋಧ ಪಕ್ಷದ ನಾಯಕನಿಗೆ ಮಹತ್ವವಿದೆ. ನಿಮ್ಮ ಬಣಗಳ ಗುದ್ದಾಟದಲ್ಲಿ ವಿಪಕ್ಷ ನಾಯಕನಿಗಿರುವ ಮಹತ್ವವನ್ನು ಕಳೆಯಬೇಡಿ. ಬಿಜೆಪಿಗೆ ಇನ್ನೂ ಸಹ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದರೆ ಭಾರಿ ಚೌಕಾಶಿ ವ್ಯವಹಾರ ನಡೆಯುತ್ತಿದೆ ಎಂದೇ ಅರ್ಥ ಎಂದು ಆರೋಪಿಸಿದ ಕಾಂಗ್ರೆಸ್.
ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಆಗಿತ್ತು?, ವಿಪಕ್ಷ ನಾಯಕನ ಹುದ್ದೆಯನ್ನೂ ಮಾರಾಟಕ್ಕಿಡಲಾಗಿದೆಯೇ? ವಿಪಕ್ಷ ನಾಯಕನ ಹುದ್ದೆಗೆಷ್ಟು? ಪಕ್ಷದ ಅಧ್ಯಕ್ಷ ಹುದ್ದೆಗೆಷ್ಟು? ಇದಕ್ಕೆಲ್ಲಾ ಅಮಿತ್ ಶಾ ಉತ್ತರಿಸಬೇಕು! ಎಂದು ಆಗ್ರಹಿಸಿರೋ ಕಾಂಗ್ರೆಸ್
ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ನಾಯಕರೇ ಇಲ್ಲದ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ! ಎಂದು ಕಿಡಿಕಾರಿದ ಕಾಂಗ್ರೆಸ್
ಬಿಜೆಪಿ ಪಕ್ಷ ಆಡಳಿತ ಮಾಡಲು ಅಸಮರ್ಥರು ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ಅಸಮರ್ಥರು ಎಂದು ತಿಳಿಯುತ್ತಿದೆ ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ ಎಂದ ಕಾಂಗ್ರೆಸ್.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…