ಪ್ರಕೃತಿಯಲ್ಲಿ ಎರಡು ಬಗೆಯ ವಿಪತ್ತುಗಳು ಸಂಭವಿಸುತ್ತವೆ. ಒಂದು ಮಾನವ ನಿರ್ಮಿತ ಮತ್ತೊಂದು ಪ್ರಕೃತಿ ನಿರ್ಮಿತ. ಈ ಎರಡೂ ಬಗೆಯ ವಿಕೋಪಗಳೂ ಅನಿರೀಕ್ಷಿತವಾಗಿಯೇ ಸಂಭವಿಸುತ್ತವೆ. ಆದ್ದರಿಂದ ಅಂತಹ ವಿಪತ್ತುಗಳನ್ನು ತಡೆಯಲು ಸದಾ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎನ್. ಶಿವಶಂಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಅಣುಕು ಪ್ರದರ್ಶನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಬೆಂಗಳೂರು ನಗರ ಜಿಲ್ಲೆಗೆ ಹೊಂದಿಕೊಂಡಿದ್ದು ಅಪಾಯಕಾರಿ ಕಾರ್ಖಾನೆಗಳು , ದೊಡ್ಡ ದೊಡ್ಡ ವಸತಿ ಸಮುಚ್ಛಯಗಳು, ಮಾಲ್, ಬಿಲ್ಡಿಂಗ್, ಶಾಲಾ ಕಾಲೇಜು, ಅಸ್ಪತ್ರೆ, ಈ ಎಲ್ಲಾ ತರಹದ ದೊಡ್ಡ ದೊಡ್ಡ ಕಟ್ಟಡಗಳಲ್ಲಿ ಜನಸಂದಣಿ ಹೆಚ್ಚುತ್ತಿದೆ. ಈ ಸ್ಥಳಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ತಡೆಗಟ್ಟಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸದಾ ಸನ್ನದ್ಧವಾಗಿರಲು ಇಂತಹ ತರಬೇತಿ ಕಾರ್ಯಕ್ರಮಗಳು ಸಹಕಾರಿ ಎಂದರು.
ಜಿಲ್ಲೆಯಲ್ಲಿ ಸಂಭವಿಸಬಹುದಾದ ವಿಪತ್ತು ತಡೆಗಟ್ಟಲು ಪ್ರತಿಯೊಬ್ಬ ಜಿಲ್ಲಾ ಮಟ್ಟದ ಅಧಿಕಾರಿಯ ಪಾತ್ರ ಮತ್ತು ಜವಾಬ್ದಾರಿ ಬಹಳ ಮುಖ್ಯ. ವಿಪತ್ತು ಸಂಭವಿಸುವ ಸಂದರ್ಭದಲ್ಲಿ ವಿಳಂಬ ಮಾಡದೇ ಎಲ್ಲಾ ಅಧಿಕಾರಿಗಳು ಸೂಕ್ತ ಕಾಲಕ್ಕೆ ಸ್ಪಂದಿಸಬೇಕು. ಸಂಭವನೀಯ ವಿಪತ್ತು ತಡೆಗಟ್ಟುವಲ್ಲಿ, ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ಇಂತಹ ತರಬೇತಿ ಕಾರ್ಯಕ್ರಮಗಳ ಅಗತ್ಯವಿದೆ ಎಂದು ಅವರು ಹೇಳಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾರ್ಖಾನೆಗಳ ಮುಖ್ಯಸ್ಥರು, ಅಗ್ನಿಶಾಮಕ ದಳ, ಎನ್.ಡಿ.ಆರ್.ಎಫ್ ಸಿಬ್ಬಂದಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ವಿಪತ್ತು ನಿರ್ವಹಣಾ ಮುಖ್ಯಸ್ಥರು, ಇನ್ನಿತರ ಸಹಭಾಗಿದಾರರಿಗೆ ಅಣುಕು ಪ್ರದರ್ಶನ ಕೈಗೊಳ್ಳಲು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಅಮರೇಶ್ ಹೆಚ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ , ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ಜಂಟಿ ನಿರ್ದೇಶಕ ನವನೀತ್ ಮೋಹನ್, ಉಪ ನಿರ್ದೇಶಕರುಗಳಾದ ಸೋಮಶೇಖರ್, ನರಸಿಂಹ ಮೂರ್ತಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಬಸವರಾಜು ವಿ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…