ರಾಜ್ಯಾದ್ಯಂತ ನೀರಿಗಾಗಿ ಕೊಳವೆಬಾವಿ, ಬೋರ್ವೆಲ್ಗಳನ್ನು ಕೊರೆದು, ನೀರು ಸಿಗದಿದ್ದ ಸಂದರ್ಭದಲ್ಲಿ ಕೊಳವೆಬಾವಿ, ಬೋರ್ವೆಲ್ಗಳನ್ನು ಮುಚ್ಚದೇ, ನೆಲಸಮ ಮಾಡದೆ ಇರುವುದರಿಂದ, ಸಣ್ಣ ಮಕ್ಕಳು ಕೊಳವೆಬಾವಿ, ಬೋರ್ವೆಲ್ಗಳಲ್ಲಿ ಬಿದ್ದು, ಆಗಿಂದಾಗ್ಗೆ ಅವಘಡವಾಗುತ್ತಿರುವ ವಿಷಯವು ಗಮನದಲ್ಲಿರುತ್ತದೆ.
ಆದ್ದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಈಗಾಗಲೇ ಕೊರೆಯಿಸಿರುವ, ಕೊರೆಯಿಸುತ್ತಿರುವ ಕೊಳವೆಬಾವಿ, ಬೋರ್ವೆಲ್ಗಳನ್ನು ನೀರು ಸಿಗದೇ ಇರುವ ಸಂದರ್ಭಗಳಲ್ಲಿ ಅಥವಾ ನೀರು ಬತ್ತಿಹೋಗಿ ಅಳವಡಿಸಿರುವ ಮೋಟರ್, ಪಂಪ್ ಮತ್ತು ಕೇಸಿಂಗ್ಗಳನ್ನು ತೆಗೆದಂತಹ ಸಂದರ್ಭಗಳಲ್ಲಿ ಕೂಡಲೇ ಮುಚ್ಚುವಂತೆ, ನೆಲಸಮ ಮಾಡಬೇಕು.
ಒಂದು ವೇಳೆ ಕೊಳವೆಬಾವಿ, ಬೋರ್ವೆಲ್ ಗಳನ್ನು ಕೊರೆಯಿಸಿ, ನೀರು ಸಿಗದಂತಹ ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದ ಪಕ್ಷದಲ್ಲಿ ಜಮೀನಿನ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…