Categories: ರಾಜ್ಯ

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ ಜಿ ರಾಮ್ ಜಿ) ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ ತಾಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉದ್ಯೋಗ ಚೀಟಿ ಹೊಂದಿಲ್ಲದ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ಜಾಬ್ ಕಾರ್ಡ್‌ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಆಧಾರ್ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌, ಪಡಿತರ ಚೀಟಿ ಸಲ್ಲಿಸಿ ಹೊಸದಾಗಿ ಉದ್ಯೋಗ ಚೀಟಿ ಪಡೆಯಬಹುದು.

ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಬಹುದು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ನೇತೃತ್ವದ ಕುಟುಂಬಗಳು ಮತ್ತು ಭೂ ರಹಿತ ಕೂಲಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕಾರ್ಡ್ ವಿತರಿಸಲಾಗುವುದು.

ಈ ಬಗ್ಗೆ ಪಿಡಿಒ ಹಾಗೂ ಐ.ಇ.ಸಿ ಸಂಯೋಜಕರು ಗ್ರಾ.ಪಂ. ಸಿಬ್ಬಂದಿ, ಬಿ ಎಫ್ ಟಿಗಳು ಗ್ರಾಮ ಕಾಯಕ ಮಿತ್ರರು, ಟಿ ಆರ್ ಎಂ ಗಳು ಮನೆ-ಮನೆಗೆ ಭೇಟಿ ನೀಡಿ ನಿಷ್ಕ್ರಿಯ ಕಾರ್ಡ್‌ಗಳನ್ನು ಗುರುತಿಸಿ, ಜನರಲ್ಲಿ ಉದ್ಯೋಗದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ಈ ಯೋಜನೆಯಡಿ ವಾರ್ಷಿಕ ಉದ್ಯೋಗದ ಅವಧಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನದ ಕೂಲಿ ಮೊತ್ತವನ್ನೂ 370 ರೂ. ರಿಂದ 382 ರೂ.ಗೆ ಹೆಚ್ಚಿಸಲಾಗಿದೆ. ಗ್ರಾಮೀಣ ಜನರು ಈ ಯೋಜನೆಯಡಿ ದೊರಕುವ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

1 minute ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

31 minutes ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

3 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

13 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

13 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

16 hours ago