Categories: ರಾಜ್ಯ

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ ಜಿ ರಾಮ್ ಜಿ) ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ ತಾಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಮತ್ತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉದ್ಯೋಗ ಚೀಟಿ ಹೊಂದಿಲ್ಲದ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ಜಾಬ್ ಕಾರ್ಡ್‌ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಆಧಾರ್ ಕಾರ್ಡ್‌, ಬ್ಯಾಂಕ್‌ ಪಾಸ್‌ ಬುಕ್‌, ಪಡಿತರ ಚೀಟಿ ಸಲ್ಲಿಸಿ ಹೊಸದಾಗಿ ಉದ್ಯೋಗ ಚೀಟಿ ಪಡೆಯಬಹುದು.

ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿ ಇರುವವರು ಈ ಅಭಿಯಾನದ ಮೂಲಕ ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಬಹುದು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ವಿಶೇಷ ಚೇತನರು, ಮಹಿಳಾ ನೇತೃತ್ವದ ಕುಟುಂಬಗಳು ಮತ್ತು ಭೂ ರಹಿತ ಕೂಲಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕಾರ್ಡ್ ವಿತರಿಸಲಾಗುವುದು.

ಈ ಬಗ್ಗೆ ಪಿಡಿಒ ಹಾಗೂ ಐ.ಇ.ಸಿ ಸಂಯೋಜಕರು ಗ್ರಾ.ಪಂ. ಸಿಬ್ಬಂದಿ, ಬಿ ಎಫ್ ಟಿಗಳು ಗ್ರಾಮ ಕಾಯಕ ಮಿತ್ರರು, ಟಿ ಆರ್ ಎಂ ಗಳು ಮನೆ-ಮನೆಗೆ ಭೇಟಿ ನೀಡಿ ನಿಷ್ಕ್ರಿಯ ಕಾರ್ಡ್‌ಗಳನ್ನು ಗುರುತಿಸಿ, ಜನರಲ್ಲಿ ಉದ್ಯೋಗದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ಈ ಯೋಜನೆಯಡಿ ವಾರ್ಷಿಕ ಉದ್ಯೋಗದ ಅವಧಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನದ ಕೂಲಿ ಮೊತ್ತವನ್ನೂ 370 ರೂ. ರಿಂದ 382 ರೂ.ಗೆ ಹೆಚ್ಚಿಸಲಾಗಿದೆ. ಗ್ರಾಮೀಣ ಜನರು ಈ ಯೋಜನೆಯಡಿ ದೊರಕುವ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

7 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

13 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

14 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago