Categories: ತುಮಕೂರು

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

“ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025” ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಮಹತ್ವಾಕಾಂಕ್ಷಿ ಯೋಜನೆವಾಗಿದೆ. VBG RAM G ಯೋಜನೆಯ ಮೂಲಕ ಗುಣಮಟ್ಟದ ಹಾಗೂ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದ್ದು, ಕೂಲಿಕಾರರ ಕೂಲಿ ಮೊತ್ತವನ್ನು 370 ರಿಂದ 382 ಹೆಚ್ಚಿಸಲಾಗಿದೆ. ಅರ್ಹರು ಸದುಪಯೋಗ ಪಡಿದುಕೊಳ್ಳಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವರಾಜಯ್ಯ ರವರು ಕರೆ ನೀಡಿದರು.

ತಾಲ್ಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ “ಮಾರಮ್ಮನ ಗುಡಿ ಕಟ್ಟೆ ಸಮಗ್ರ ಅಭಿವೃದ್ಧಿ” ಕಾಮಗಾರಿಯನ್ನು ಆರಂಭಿಸುವ ಮೂಲಕ ಅದೇ ಸ್ಥಳದಲ್ಲಿ ತಾಲ್ಲೂಕಿನ ಅಧಿಕಾರಿ ವೃಂದದವರು ಹಾಗೂ ವಿಬಿ-ಜಿ ರಾಮ್ ಜಿ ನೌಕರರು ಕೂಲಿಕಾರರೊಂದಿಗೆ ಶ್ರಮದಾನ ಮಾಡುವ ಮೂಲಕ ಯೋಜನೆಗೆ ಅದ್ಬುತ ಚಾಲನೆ ನೀಡಲಾಗಿದೆ.

ನಂತರ ಸಹಾಯಕ ನಿರ್ದೇಶಕರು (ಗ್ರಾ,ಉ) ಇಂದ್ರೇಶ್ ರವರು ಮಾತನಾಡುತ್ತಾ, ಸಾರ್ವಜನಿಕರಿಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾದ ವಿಬಿ-ಜಿ ರಾಮ್ ಜಿ ಯೋಜನೆ ಜುಲೈ 01 ರಿಂದ ಇಡೀ ದೇಶದಾದ್ಯಂತ ಚಾಲನೆ ನೀಡಲಾಗಿದೆ. ನಾವು ನಮ್ಮ ಕೂಲಿಕಾರರೊಂದಿಗೆ ಶ್ರಮದಾನ ಮಾಡುವ ಮೂಲಕ ಒಂದು ಉತ್ತಮ ಘಳಿಗೆ ಸೃಷ್ಟಿಸಿದ್ದೇವೆ ಎಂದು ಹರ್ಷ ವ್ಯಕ್ತ ಪಡಿಸಿದ್ದಾರೆ.

ತಾಲ್ಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಕೂಲಿಕಾರರೊಂದಿಗೆ ಯೋಜನೆಯನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಗಿದೆ. ತಾಲ್ಲೂಕು ಪಂಚಾಯತ್ ಅಧಿಕಾರಿ ವರ್ಗದವರು ಹಾಗೂ ವಿಬಿ-ಜಿ ರಾಮ್ ಜಿ ಯೋಜನೆಯ ಸಿಬ್ಬಂದಿಗಳು ಕೂಲಿಕಾರಯೊಂದಿಗೆ ಶ್ರಮದಾನ ಮಾಡುವ ಮೂಲಕ ಒಂದು ಅರ್ಥಪೂರ್ಣ ಚಾಲನೆ ನೀಡಲಾಗಿದೆ ಎಂದರು.

ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ ಜೊತೆಗೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಈ ಯೋಜನೆ ಸಹಕಾರಿಯಾಗಲಿದೆ. ಪ್ರತಿಯೊಬ್ಬ ಅರ್ಹ ಕುಟುಂಬವೂ ಯೋಜನೆಯ ಸೌಲಭ್ಯಗಳನ್ನು ಪಡೆದು ಉದ್ಯೋಗದ ಜೊತೆಗೆ ಗ್ರಾಮಾಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಿದರು.

ಈ ವೇಳೆ ವ್ಯವಸ್ಥಾಪಕರಾದ ಬಸವರಾಜು ರವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ್, ಬಾಬು ಶ್ರೀನಿವಾಸ್, ಮಂಜುನಾಥ್, ಲಕ್ಷ್ಮೀಬಾಯಿ, ಉಮೇಶ್, ತಾಂತ್ರಿಕ ಸಂಯೋಜಕರಾದ ಶ್ರೀಕಾಂತ್, ನಾಗರಾಜು, mis ಸಂಯೋಜಕರಾದ ಸರಸ್ವತಿ, ತಾಂತ್ರಿಕ ಸಹಾಯಕರಾದ ವರುಣ್, ಮಲ್ಲಿಕಾರ್ಜುನ್, ಪ್ರಕಾಶ್, ಹೊನ್ನೇಶ್, ಬಿಫ್ಟಿಫ್ ಗಳು, ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳು , ತೀರ್ಥಪುರ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಕೂಲಿಕಾರರು ಹಾಜರಿದ್ದರು.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

2 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

4 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

18 hours ago