Categories: ತುಮಕೂರು

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

“ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025” ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಮಹತ್ವಾಕಾಂಕ್ಷಿ ಯೋಜನೆವಾಗಿದೆ. VBG RAM G ಯೋಜನೆಯ ಮೂಲಕ ಗುಣಮಟ್ಟದ ಹಾಗೂ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದ್ದು, ಕೂಲಿಕಾರರ ಕೂಲಿ ಮೊತ್ತವನ್ನು 370 ರಿಂದ 382 ಹೆಚ್ಚಿಸಲಾಗಿದೆ. ಅರ್ಹರು ಸದುಪಯೋಗ ಪಡಿದುಕೊಳ್ಳಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವರಾಜಯ್ಯ ರವರು ಕರೆ ನೀಡಿದರು.

ತಾಲ್ಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ “ಮಾರಮ್ಮನ ಗುಡಿ ಕಟ್ಟೆ ಸಮಗ್ರ ಅಭಿವೃದ್ಧಿ” ಕಾಮಗಾರಿಯನ್ನು ಆರಂಭಿಸುವ ಮೂಲಕ ಅದೇ ಸ್ಥಳದಲ್ಲಿ ತಾಲ್ಲೂಕಿನ ಅಧಿಕಾರಿ ವೃಂದದವರು ಹಾಗೂ ವಿಬಿ-ಜಿ ರಾಮ್ ಜಿ ನೌಕರರು ಕೂಲಿಕಾರರೊಂದಿಗೆ ಶ್ರಮದಾನ ಮಾಡುವ ಮೂಲಕ ಯೋಜನೆಗೆ ಅದ್ಬುತ ಚಾಲನೆ ನೀಡಲಾಗಿದೆ.

ನಂತರ ಸಹಾಯಕ ನಿರ್ದೇಶಕರು (ಗ್ರಾ,ಉ) ಇಂದ್ರೇಶ್ ರವರು ಮಾತನಾಡುತ್ತಾ, ಸಾರ್ವಜನಿಕರಿಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾದ ವಿಬಿ-ಜಿ ರಾಮ್ ಜಿ ಯೋಜನೆ ಜುಲೈ 01 ರಿಂದ ಇಡೀ ದೇಶದಾದ್ಯಂತ ಚಾಲನೆ ನೀಡಲಾಗಿದೆ. ನಾವು ನಮ್ಮ ಕೂಲಿಕಾರರೊಂದಿಗೆ ಶ್ರಮದಾನ ಮಾಡುವ ಮೂಲಕ ಒಂದು ಉತ್ತಮ ಘಳಿಗೆ ಸೃಷ್ಟಿಸಿದ್ದೇವೆ ಎಂದು ಹರ್ಷ ವ್ಯಕ್ತ ಪಡಿಸಿದ್ದಾರೆ.

ತಾಲ್ಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಕೂಲಿಕಾರರೊಂದಿಗೆ ಯೋಜನೆಯನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಗಿದೆ. ತಾಲ್ಲೂಕು ಪಂಚಾಯತ್ ಅಧಿಕಾರಿ ವರ್ಗದವರು ಹಾಗೂ ವಿಬಿ-ಜಿ ರಾಮ್ ಜಿ ಯೋಜನೆಯ ಸಿಬ್ಬಂದಿಗಳು ಕೂಲಿಕಾರಯೊಂದಿಗೆ ಶ್ರಮದಾನ ಮಾಡುವ ಮೂಲಕ ಒಂದು ಅರ್ಥಪೂರ್ಣ ಚಾಲನೆ ನೀಡಲಾಗಿದೆ ಎಂದರು.

ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ ಜೊತೆಗೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಈ ಯೋಜನೆ ಸಹಕಾರಿಯಾಗಲಿದೆ. ಪ್ರತಿಯೊಬ್ಬ ಅರ್ಹ ಕುಟುಂಬವೂ ಯೋಜನೆಯ ಸೌಲಭ್ಯಗಳನ್ನು ಪಡೆದು ಉದ್ಯೋಗದ ಜೊತೆಗೆ ಗ್ರಾಮಾಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಿದರು.

ಈ ವೇಳೆ ವ್ಯವಸ್ಥಾಪಕರಾದ ಬಸವರಾಜು ರವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ್, ಬಾಬು ಶ್ರೀನಿವಾಸ್, ಮಂಜುನಾಥ್, ಲಕ್ಷ್ಮೀಬಾಯಿ, ಉಮೇಶ್, ತಾಂತ್ರಿಕ ಸಂಯೋಜಕರಾದ ಶ್ರೀಕಾಂತ್, ನಾಗರಾಜು, mis ಸಂಯೋಜಕರಾದ ಸರಸ್ವತಿ, ತಾಂತ್ರಿಕ ಸಹಾಯಕರಾದ ವರುಣ್, ಮಲ್ಲಿಕಾರ್ಜುನ್, ಪ್ರಕಾಶ್, ಹೊನ್ನೇಶ್, ಬಿಫ್ಟಿಫ್ ಗಳು, ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳು , ತೀರ್ಥಪುರ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಕೂಲಿಕಾರರು ಹಾಜರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

20 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ- ಸಚಿವ ಕೆ.ಜೆ. ಜಾರ್ಜ್

ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…

1 day ago