Categories: ತುಮಕೂರು

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

“ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025” ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಮಹತ್ವಾಕಾಂಕ್ಷಿ ಯೋಜನೆವಾಗಿದೆ. VBG RAM G ಯೋಜನೆಯ ಮೂಲಕ ಗುಣಮಟ್ಟದ ಹಾಗೂ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದ್ದು, ಕೂಲಿಕಾರರ ಕೂಲಿ ಮೊತ್ತವನ್ನು 370 ರಿಂದ 382 ಹೆಚ್ಚಿಸಲಾಗಿದೆ. ಅರ್ಹರು ಸದುಪಯೋಗ ಪಡಿದುಕೊಳ್ಳಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವರಾಜಯ್ಯ ರವರು ಕರೆ ನೀಡಿದರು.

ತಾಲ್ಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ “ಮಾರಮ್ಮನ ಗುಡಿ ಕಟ್ಟೆ ಸಮಗ್ರ ಅಭಿವೃದ್ಧಿ” ಕಾಮಗಾರಿಯನ್ನು ಆರಂಭಿಸುವ ಮೂಲಕ ಅದೇ ಸ್ಥಳದಲ್ಲಿ ತಾಲ್ಲೂಕಿನ ಅಧಿಕಾರಿ ವೃಂದದವರು ಹಾಗೂ ವಿಬಿ-ಜಿ ರಾಮ್ ಜಿ ನೌಕರರು ಕೂಲಿಕಾರರೊಂದಿಗೆ ಶ್ರಮದಾನ ಮಾಡುವ ಮೂಲಕ ಯೋಜನೆಗೆ ಅದ್ಬುತ ಚಾಲನೆ ನೀಡಲಾಗಿದೆ.

ನಂತರ ಸಹಾಯಕ ನಿರ್ದೇಶಕರು (ಗ್ರಾ,ಉ) ಇಂದ್ರೇಶ್ ರವರು ಮಾತನಾಡುತ್ತಾ, ಸಾರ್ವಜನಿಕರಿಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾದ ವಿಬಿ-ಜಿ ರಾಮ್ ಜಿ ಯೋಜನೆ ಜುಲೈ 01 ರಿಂದ ಇಡೀ ದೇಶದಾದ್ಯಂತ ಚಾಲನೆ ನೀಡಲಾಗಿದೆ. ನಾವು ನಮ್ಮ ಕೂಲಿಕಾರರೊಂದಿಗೆ ಶ್ರಮದಾನ ಮಾಡುವ ಮೂಲಕ ಒಂದು ಉತ್ತಮ ಘಳಿಗೆ ಸೃಷ್ಟಿಸಿದ್ದೇವೆ ಎಂದು ಹರ್ಷ ವ್ಯಕ್ತ ಪಡಿಸಿದ್ದಾರೆ.

ತಾಲ್ಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಕೂಲಿಕಾರರೊಂದಿಗೆ ಯೋಜನೆಯನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಗಿದೆ. ತಾಲ್ಲೂಕು ಪಂಚಾಯತ್ ಅಧಿಕಾರಿ ವರ್ಗದವರು ಹಾಗೂ ವಿಬಿ-ಜಿ ರಾಮ್ ಜಿ ಯೋಜನೆಯ ಸಿಬ್ಬಂದಿಗಳು ಕೂಲಿಕಾರಯೊಂದಿಗೆ ಶ್ರಮದಾನ ಮಾಡುವ ಮೂಲಕ ಒಂದು ಅರ್ಥಪೂರ್ಣ ಚಾಲನೆ ನೀಡಲಾಗಿದೆ ಎಂದರು.

ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ ಜೊತೆಗೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಈ ಯೋಜನೆ ಸಹಕಾರಿಯಾಗಲಿದೆ. ಪ್ರತಿಯೊಬ್ಬ ಅರ್ಹ ಕುಟುಂಬವೂ ಯೋಜನೆಯ ಸೌಲಭ್ಯಗಳನ್ನು ಪಡೆದು ಉದ್ಯೋಗದ ಜೊತೆಗೆ ಗ್ರಾಮಾಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸಿದರು.

ಈ ವೇಳೆ ವ್ಯವಸ್ಥಾಪಕರಾದ ಬಸವರಾಜು ರವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ್, ಬಾಬು ಶ್ರೀನಿವಾಸ್, ಮಂಜುನಾಥ್, ಲಕ್ಷ್ಮೀಬಾಯಿ, ಉಮೇಶ್, ತಾಂತ್ರಿಕ ಸಂಯೋಜಕರಾದ ಶ್ರೀಕಾಂತ್, ನಾಗರಾಜು, mis ಸಂಯೋಜಕರಾದ ಸರಸ್ವತಿ, ತಾಂತ್ರಿಕ ಸಹಾಯಕರಾದ ವರುಣ್, ಮಲ್ಲಿಕಾರ್ಜುನ್, ಪ್ರಕಾಶ್, ಹೊನ್ನೇಶ್, ಬಿಫ್ಟಿಫ್ ಗಳು, ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳು , ತೀರ್ಥಪುರ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಕೂಲಿಕಾರರು ಹಾಜರಿದ್ದರು.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

19 minutes ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

8 hours ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

11 hours ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

23 hours ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

23 hours ago

ಮೊಹರಂ ಅಂಗವಾಗಿ ಕಿಲ್ಲಾ ಮಸೀದಿಯಲ್ಲಿ ಶಿಯಾ ಮುಸ್ಲಿಮರ ಹಸೇನ್–ಹುಸೇನ್ ಆಚರಣೆ

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ…

1 day ago