ವಿಮರ್ಶಾ ಕ್ಷೇತ್ರಕ್ಕೆ ಡಿ.ಆರ್ ನಾಗರಾಜ್ ಅವರ ಕೊಡುಗೆ ಅಪಾರ- ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ

ದೊಡ್ಡಬಳ್ಳಾಪುರ: ಡಿ.ಆರ್ ನಾಗರಾಜ್ ಅವರು ಕನ್ನಡ‌ ಸಾಹಿತ್ಯದ ಖ್ಯಾತ ವಿಮರ್ಶಕ, ಚಿಂತಕ ಮತ್ತು ಸಾಹಿತಿ. ಇವರ “ಸಾಹಿತ್ಯ ಕಥನ” ಎಂಬ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.”ಅಮೃತ ಮತ್ತು ಗರುಡ”, ಶಕ್ತಿ ಶಾರದೆಯ ಮೇಳ, ನಾಗಾರ್ಜುನ, ಅಲ್ಲಮಪ್ರಭು ಮತ್ತು ಶೈವ ಪ್ರತಿಭೆ, ಇವು ಇವರ ಪ್ರಸಿದ್ಧ ಕೃತಿಗಳು ಎಂದು ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ  ಹೇಳಿದರು.

 ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ “ಡಿ .ಆರ್ ನಾಗರಾಜ್ ಅವರ ಕೃತಿಗಳ ಅವಲೋಕನ “ಉಪನ್ಯಾಸ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ಪಾಶ್ಚಾತ್ಯ ದೇಶಗಳ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅಲ್ಲದೆ ಭಾರತದ ವಿವಿಧ ಕ್ಷೇತ್ರಗಳಲ್ಲಿ ನಡೆದ ವಿಚಾರ ಸಂಕೀರ್ಣಗಳಲ್ಲಿ ಪಾಲ್ಗೊಂಡು ಪ್ರಬಂಧ ಮಂಡಿಸಿದ ಡಿ. ಆರ್ ನಾಗರಾಜ್ ಅವರು, ಆಳವಾದ ವಿದ್ವತ್ತಿನ ವ್ಯಕ್ತಿಯಾಗಿದ್ದವರು, ವಿಮರ್ಶಾ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದ್ದಲ್ಲದೆ  ಉತ್ತಮ ವಾಗ್ಮಿಯೂ ಸಹ ಆಗಿದ್ದರು. ಇಂಗ್ಲಿಷ್ ನಲ್ಲಾಗಲಿ, ಕನ್ನಡದಲ್ಲಾಗಲಿ ಅತ್ಯಂತ ಸಮರ್ಥವಾಗಿ ತಮ್ಮ ವಿಚಾರಗಳನ್ನು ಅಭಿವ್ಯಕ್ತಿಗೊಳಿಸುವ ಸಾಮರ್ಥ್ಯವನ್ನು ಹೊಂದಿದ್ದರು. ಹೀಗಾಗಿ ಅವರು ದೇಶ ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕರ್ತವ್ಯವನ್ನು ನಿರ್ವಹಿಸಿದ್ದರು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಜೆ.ವಿ.ಚಂದ್ರಶೇಖರ್, ಪ್ರಕಾಶ್ ಸಿ.ಪಿ, ಪಿ.ಚೈತ್ರ, ಬಿ.ಶ್ರೀನಿವಾಸ್, ನಾರಾಯಣಸ್ವಾಮಿ, ನಟರಾಜು, ಶ್ರೀಧರ್, ಗ್ರಂಥ ಪಾಲಕರಾದ ಎಚ್ ಕೆ ಪ್ರೇಮ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

7 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

7 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

7 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

10 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

16 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

18 hours ago