ವಿಮರ್ಶಾ ಕ್ಷೇತ್ರಕ್ಕೆ ಡಿ.ಆರ್ ನಾಗರಾಜ್ ಅವರ ಕೊಡುಗೆ ಅಪಾರ- ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ

ದೊಡ್ಡಬಳ್ಳಾಪುರ: ಡಿ.ಆರ್ ನಾಗರಾಜ್ ಅವರು ಕನ್ನಡ‌ ಸಾಹಿತ್ಯದ ಖ್ಯಾತ ವಿಮರ್ಶಕ, ಚಿಂತಕ ಮತ್ತು ಸಾಹಿತಿ. ಇವರ “ಸಾಹಿತ್ಯ ಕಥನ” ಎಂಬ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.”ಅಮೃತ ಮತ್ತು ಗರುಡ”, ಶಕ್ತಿ ಶಾರದೆಯ ಮೇಳ, ನಾಗಾರ್ಜುನ, ಅಲ್ಲಮಪ್ರಭು ಮತ್ತು ಶೈವ ಪ್ರತಿಭೆ, ಇವು ಇವರ ಪ್ರಸಿದ್ಧ ಕೃತಿಗಳು ಎಂದು ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ  ಹೇಳಿದರು.

 ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ “ಡಿ .ಆರ್ ನಾಗರಾಜ್ ಅವರ ಕೃತಿಗಳ ಅವಲೋಕನ “ಉಪನ್ಯಾಸ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ಪಾಶ್ಚಾತ್ಯ ದೇಶಗಳ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅಲ್ಲದೆ ಭಾರತದ ವಿವಿಧ ಕ್ಷೇತ್ರಗಳಲ್ಲಿ ನಡೆದ ವಿಚಾರ ಸಂಕೀರ್ಣಗಳಲ್ಲಿ ಪಾಲ್ಗೊಂಡು ಪ್ರಬಂಧ ಮಂಡಿಸಿದ ಡಿ. ಆರ್ ನಾಗರಾಜ್ ಅವರು, ಆಳವಾದ ವಿದ್ವತ್ತಿನ ವ್ಯಕ್ತಿಯಾಗಿದ್ದವರು, ವಿಮರ್ಶಾ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದ್ದಲ್ಲದೆ  ಉತ್ತಮ ವಾಗ್ಮಿಯೂ ಸಹ ಆಗಿದ್ದರು. ಇಂಗ್ಲಿಷ್ ನಲ್ಲಾಗಲಿ, ಕನ್ನಡದಲ್ಲಾಗಲಿ ಅತ್ಯಂತ ಸಮರ್ಥವಾಗಿ ತಮ್ಮ ವಿಚಾರಗಳನ್ನು ಅಭಿವ್ಯಕ್ತಿಗೊಳಿಸುವ ಸಾಮರ್ಥ್ಯವನ್ನು ಹೊಂದಿದ್ದರು. ಹೀಗಾಗಿ ಅವರು ದೇಶ ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕರ್ತವ್ಯವನ್ನು ನಿರ್ವಹಿಸಿದ್ದರು ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಜೆ.ವಿ.ಚಂದ್ರಶೇಖರ್, ಪ್ರಕಾಶ್ ಸಿ.ಪಿ, ಪಿ.ಚೈತ್ರ, ಬಿ.ಶ್ರೀನಿವಾಸ್, ನಾರಾಯಣಸ್ವಾಮಿ, ನಟರಾಜು, ಶ್ರೀಧರ್, ಗ್ರಂಥ ಪಾಲಕರಾದ ಎಚ್ ಕೆ ಪ್ರೇಮ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

6 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

7 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

7 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

10 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

13 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

15 hours ago