ದೊಡ್ಡಬಳ್ಳಾಪುರ: ಡಿ.ಆರ್ ನಾಗರಾಜ್ ಅವರು ಕನ್ನಡ ಸಾಹಿತ್ಯದ ಖ್ಯಾತ ವಿಮರ್ಶಕ, ಚಿಂತಕ ಮತ್ತು ಸಾಹಿತಿ. ಇವರ “ಸಾಹಿತ್ಯ ಕಥನ” ಎಂಬ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.”ಅಮೃತ ಮತ್ತು ಗರುಡ”, ಶಕ್ತಿ ಶಾರದೆಯ ಮೇಳ, ನಾಗಾರ್ಜುನ, ಅಲ್ಲಮಪ್ರಭು ಮತ್ತು ಶೈವ ಪ್ರತಿಭೆ, ಇವು ಇವರ ಪ್ರಸಿದ್ಧ ಕೃತಿಗಳು ಎಂದು ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ ಹೇಳಿದರು.
ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ “ಡಿ .ಆರ್ ನಾಗರಾಜ್ ಅವರ ಕೃತಿಗಳ ಅವಲೋಕನ “ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಶ್ಚಾತ್ಯ ದೇಶಗಳ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಅಲ್ಲದೆ ಭಾರತದ ವಿವಿಧ ಕ್ಷೇತ್ರಗಳಲ್ಲಿ ನಡೆದ ವಿಚಾರ ಸಂಕೀರ್ಣಗಳಲ್ಲಿ ಪಾಲ್ಗೊಂಡು ಪ್ರಬಂಧ ಮಂಡಿಸಿದ ಡಿ. ಆರ್ ನಾಗರಾಜ್ ಅವರು, ಆಳವಾದ ವಿದ್ವತ್ತಿನ ವ್ಯಕ್ತಿಯಾಗಿದ್ದವರು, ವಿಮರ್ಶಾ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪನ್ನು ಮೂಡಿಸಿದ್ದಲ್ಲದೆ ಉತ್ತಮ ವಾಗ್ಮಿಯೂ ಸಹ ಆಗಿದ್ದರು. ಇಂಗ್ಲಿಷ್ ನಲ್ಲಾಗಲಿ, ಕನ್ನಡದಲ್ಲಾಗಲಿ ಅತ್ಯಂತ ಸಮರ್ಥವಾಗಿ ತಮ್ಮ ವಿಚಾರಗಳನ್ನು ಅಭಿವ್ಯಕ್ತಿಗೊಳಿಸುವ ಸಾಮರ್ಥ್ಯವನ್ನು ಹೊಂದಿದ್ದರು. ಹೀಗಾಗಿ ಅವರು ದೇಶ ವಿದೇಶಗಳ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕರ್ತವ್ಯವನ್ನು ನಿರ್ವಹಿಸಿದ್ದರು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಜೆ.ವಿ.ಚಂದ್ರಶೇಖರ್, ಪ್ರಕಾಶ್ ಸಿ.ಪಿ, ಪಿ.ಚೈತ್ರ, ಬಿ.ಶ್ರೀನಿವಾಸ್, ನಾರಾಯಣಸ್ವಾಮಿ, ನಟರಾಜು, ಶ್ರೀಧರ್, ಗ್ರಂಥ ಪಾಲಕರಾದ ಎಚ್ ಕೆ ಪ್ರೇಮ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…