ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ತಡರಾತ್ರಿ ಟೇಕ್ಆಫ್ಗೆ ಸಿದ್ಧವಾಗಿದ್ದ ವೇಳೆ, ವಿಮಾನದ ಲ್ಯಾವೆಟರಿಯಲ್ಲಿ “Don’t go. Bomb Hai please” ಎಂದು ಇಂಗ್ಲಿಷ್ನಲ್ಲಿ ಬರೆದಿದ್ದ ಕಾಗದವನ್ನು ಕಿಡಿಗೇಡಿಯೊಬ್ಬ ಇರಿಸಿದ್ದಾನೆ. ವಿಮಾನದ ಸಿಬ್ಬಂದಿಗೆ ಈ ಸಂದೇಶ ಗಮನಕ್ಕೆ ಬಂದ ತಕ್ಷಣ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.
ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ, ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಿದರು. ಬಾಂಬ್ ನಿಷ್ಕ್ರಿಯ ದಳ ಹಾಗೂ ಭದ್ರತಾ ತಂಡಗಳು ವಿಮಾನದ ಪ್ರತಿಯೊಂದು ಭಾಗವನ್ನು ಕೂಲಂಕಷವಾಗಿ ತಪಾಸಣೆ ನಡೆಸಿದವು.
ಸುದೀರ್ಘ ಪರಿಶೀಲನೆಯ ಬಳಿಕ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗದೇ, ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ. ಬಳಿಕ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಯಿತು.
ಈ ಸಂಬಂಧ ಬಾಂಬ್ ಬೆದರಿಕೆ ಸಂದೇಶ ಬರೆದಿಟ್ಟ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಘಟನೆಯಿಂದ ಕೆಲಕಾಲ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…