ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿದ್ದ ಕ್ರೀಡಾಭಿಮಾನಿಗಳಿಗೆ ವಿರಾಟ್ ಕೊಹ್ಲಿ ಹಾಗೂ ಶುಭ್ ಮನ್ ಗಿಲ್ ಅವರ ಅದ್ಭುತ ಬ್ಯಾಟಿಂಗ್ ಹಾಗೂ ಮೊಹಮ್ಮದ್ ಸಿರಾಜ್ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡ ಶ್ರೀಲಂಕಾ ವಿರುದ್ಧ 317 ರನ್ಗಳ ಬೃಹತ್ ಗೆಲುವಿನ ಸಿಹಿ ಹಂಚಿದ್ದಾರೆ.
ಸರಣಿಯ ಮೊದಲ ಪಂದ್ಯದಲ್ಲಿ ದಾಖಲೆಯ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ 110 ಎಸೆತಗಳಲ್ಲಿ 13 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ (166) ರನ್ಗಳ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 14 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ (116) ಪ್ರದರ್ಶನದ ನೆರವಿನಿಂದ 390 ರನ್ಗಳ ಬೃಹತ್ ಮೊತ್ತ ಕಲೆ ಹಾಕಿದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಹಾಗೂ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಮೊದಲ ವಿಕೆಟ್ ಗೆ (94) ರನ್ ಪೇರಿಸುವ ಮೂಲಕ ಭದ್ರ ಅಡಿಪಾಯ ಹಾಕಿದರು, ರೋಹಿತ್ ಔಟಾದ ನಂತರ ಕ್ರಿಸ್ ಗೆ ಬಂದ ವಿರಾಟ್ ಕೊಹ್ಲಿ ಅಜೇಯರಾಗಿ ಉಳಿಯುವ ಮೂಲಕ ಶ್ರೀಲಂಕಾ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು.
ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ಲಂಕಾ ತಂಡದ ಆರಂಭ ಉತ್ತಮವಾಗಿರಲಿಲ್ಲ, ತಂಡದ ಮೊತ್ತ 7 ರನ್ ಗಳಿಸಿದ್ದ ಸಂದರ್ಭ ಅವಿಶ್ಕೋ ಫರ್ನಾಂಡೊ (1) ರನ್ ಗಳಿಸಿದ್ದಾಗ ಮೊಹಮ್ಮದ್ ಸಿರಾಜ್ ಆಘಾತ ನೀಡಿದರು, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳಾದ ಕುಶಾಲ್ ಮೆಂಡಿಸ್, ಅಸಲಂಕಾ, ನಾಯಕ ದಸುನ್ ಶನಕಾ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ ಬೇಗನೇ ಪೆವಿಲಿಯನ್ ಸೇರಿದರು.
ಭಾರತದ ಬೌಲಿಂಗ್ ವಿಭಾಗ ಅದ್ಬುತವಾದ ಪ್ರದರ್ಶನ ನೀಡಿತು, ಮೊಹಮ್ಮದ್ ಸಿರಾಜ್ ಒಂದು ಮೆಡನ್ ಸಹಿತ ಹತ್ತು ಓವರುಗಳಲ್ಲಿ 32 ರನ್ ನೀಡಿ 4 ವಿಕೆಟ್ ಪಡೆದರು, ಹಿರಿಯ ಬೌಲರ್ ಮೊಹಮ್ಮದ್ ಶಮಿ 6 ಓವರುಗಳಲ್ಲಿ 2 ಮೆಡನ್ ಸಮೇತ 20 ರನ್ ನೀಡಿ 2 ವಿಕೆಟ್ ಪಡೆಯುವ ಮೂಲಕ ಲಂಕಾ ಬ್ಯಾಟ್ಸ್ಮನ್ಗಳ ಬೆನ್ನು ಮೂಳೆ ಮುರಿದರು, ಇದರಿಂದಾಗಿ ಶ್ರೀಲಂಕಾ ತಂಡ 73 ರನ್ ಗಳಿಸಿ ಆಲೌಟ್ ಆಗುವ ಮೂಲಕ ಮಂಡಿಯೂರಿದರು.
ವರ್ಷದ ಅಂತ್ಯಕ್ಕೆ ನಡೆಯುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ದ್ವೀಪಕ್ಷಿಯ ಸರಣಿಯಲ್ಲಿ ಆರಂಭಿಕ ಆಟಗಾರು ಉತ್ತಮ ಪ್ರದರ್ಶನ ನೀಡುವ ಮೂಲಕ ಆರಂಭಿಕ ಸ್ಥಾನದ ಕೊರತೆ ನೀಗಿದಂತಾಗಿದೆ, ಕೊಟ್ಟ ಅವಕಾಶವನ್ನು ಬಳಸಿಕೊಂಡ
ಬ್ಯಾಟ್ಸ್ಮನ್ ಶುಭ್ ಮನ್ ಗಿಲ್ ಉತ್ತಮ ಪ್ರದರ್ಶನ ನೀಡುವ ಮೂಲಕ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…