ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿದ್ದ ಕ್ರೀಡಾಭಿಮಾನಿಗಳಿಗೆ ವಿರಾಟ್ ಕೊಹ್ಲಿ ಹಾಗೂ ಶುಭ್ ಮನ್ ಗಿಲ್ ಅವರ ಅದ್ಭುತ ಬ್ಯಾಟಿಂಗ್ ಹಾಗೂ ಮೊಹಮ್ಮದ್ ಸಿರಾಜ್ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡ ಶ್ರೀಲಂಕಾ ವಿರುದ್ಧ 317 ರನ್ಗಳ ಬೃಹತ್ ಗೆಲುವಿನ ಸಿಹಿ ಹಂಚಿದ್ದಾರೆ.
ಸರಣಿಯ ಮೊದಲ ಪಂದ್ಯದಲ್ಲಿ ದಾಖಲೆಯ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ 110 ಎಸೆತಗಳಲ್ಲಿ 13 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ (166) ರನ್ಗಳ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 14 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ (116) ಪ್ರದರ್ಶನದ ನೆರವಿನಿಂದ 390 ರನ್ಗಳ ಬೃಹತ್ ಮೊತ್ತ ಕಲೆ ಹಾಕಿದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಹಾಗೂ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಮೊದಲ ವಿಕೆಟ್ ಗೆ (94) ರನ್ ಪೇರಿಸುವ ಮೂಲಕ ಭದ್ರ ಅಡಿಪಾಯ ಹಾಕಿದರು, ರೋಹಿತ್ ಔಟಾದ ನಂತರ ಕ್ರಿಸ್ ಗೆ ಬಂದ ವಿರಾಟ್ ಕೊಹ್ಲಿ ಅಜೇಯರಾಗಿ ಉಳಿಯುವ ಮೂಲಕ ಶ್ರೀಲಂಕಾ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು.
ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ಲಂಕಾ ತಂಡದ ಆರಂಭ ಉತ್ತಮವಾಗಿರಲಿಲ್ಲ, ತಂಡದ ಮೊತ್ತ 7 ರನ್ ಗಳಿಸಿದ್ದ ಸಂದರ್ಭ ಅವಿಶ್ಕೋ ಫರ್ನಾಂಡೊ (1) ರನ್ ಗಳಿಸಿದ್ದಾಗ ಮೊಹಮ್ಮದ್ ಸಿರಾಜ್ ಆಘಾತ ನೀಡಿದರು, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳಾದ ಕುಶಾಲ್ ಮೆಂಡಿಸ್, ಅಸಲಂಕಾ, ನಾಯಕ ದಸುನ್ ಶನಕಾ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ ಬೇಗನೇ ಪೆವಿಲಿಯನ್ ಸೇರಿದರು.
ಭಾರತದ ಬೌಲಿಂಗ್ ವಿಭಾಗ ಅದ್ಬುತವಾದ ಪ್ರದರ್ಶನ ನೀಡಿತು, ಮೊಹಮ್ಮದ್ ಸಿರಾಜ್ ಒಂದು ಮೆಡನ್ ಸಹಿತ ಹತ್ತು ಓವರುಗಳಲ್ಲಿ 32 ರನ್ ನೀಡಿ 4 ವಿಕೆಟ್ ಪಡೆದರು, ಹಿರಿಯ ಬೌಲರ್ ಮೊಹಮ್ಮದ್ ಶಮಿ 6 ಓವರುಗಳಲ್ಲಿ 2 ಮೆಡನ್ ಸಮೇತ 20 ರನ್ ನೀಡಿ 2 ವಿಕೆಟ್ ಪಡೆಯುವ ಮೂಲಕ ಲಂಕಾ ಬ್ಯಾಟ್ಸ್ಮನ್ಗಳ ಬೆನ್ನು ಮೂಳೆ ಮುರಿದರು, ಇದರಿಂದಾಗಿ ಶ್ರೀಲಂಕಾ ತಂಡ 73 ರನ್ ಗಳಿಸಿ ಆಲೌಟ್ ಆಗುವ ಮೂಲಕ ಮಂಡಿಯೂರಿದರು.
ವರ್ಷದ ಅಂತ್ಯಕ್ಕೆ ನಡೆಯುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ದ್ವೀಪಕ್ಷಿಯ ಸರಣಿಯಲ್ಲಿ ಆರಂಭಿಕ ಆಟಗಾರು ಉತ್ತಮ ಪ್ರದರ್ಶನ ನೀಡುವ ಮೂಲಕ ಆರಂಭಿಕ ಸ್ಥಾನದ ಕೊರತೆ ನೀಗಿದಂತಾಗಿದೆ, ಕೊಟ್ಟ ಅವಕಾಶವನ್ನು ಬಳಸಿಕೊಂಡ
ಬ್ಯಾಟ್ಸ್ಮನ್ ಶುಭ್ ಮನ್ ಗಿಲ್ ಉತ್ತಮ ಪ್ರದರ್ಶನ ನೀಡುವ ಮೂಲಕ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…