ವಿವಾಹದ ಕಟ್ಟುಪಾಡುಗಳು ಇತ್ತೀಚಿನವು- ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು- ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ


ದೊಡ್ಡಬಳ್ಳಾಪುರ: ಪ್ರೀತಿಸುವವರು ದುಖಿಃಸುವಂತಾಗದೆ. ಬಾಳಿದಾಗಲೇ ಪಂಪ ಕವಿಯ ‘ಮನುಷ್ಯ ಜಾತಿ ತಾನೊಂದೇ ವಲಂ’ ಎನ್ನುವ ಮಾತು ಸಾರ್ಥಕವಾಗುತ್ತದೆ ಎಂದು ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ ಹೇಳಿದರು.

ತಾಲ್ಲೂಕಿಗೆ ಸಮೀಪದ ಅದ್ದೆ ಗ್ರಾಮದ ತಿಮ್ಮರಾಯಸ್ವಾಮಿ ದೇವಾಲಯ ಆವರಣದಲ್ಲಿ ಸೋಮವಾರ ಕುವೆಂಪು ಅವರ ಮಂತ್ರಮಾಂಗಲ್ಯದಂತೆ ಸರಳವಾಗಿ ನಡೆದ ಅಂತರ ಜಾತಿ ವಿವಾಹದಲ್ಲಿ ಜೋಡಿಯಾದ ಶಿಲ್ಪ ಮತ್ತು ಸಂದೀಪ್ ಅವರನ್ನು ಆರ್ಶಿವದಿಸಿ ಮಾತನಾಡಿದರು.

ವಿವಾಹದ ಕಟ್ಟುಪಾಡುಗಳು ಇತ್ತೀಚಿನವು. ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು. ಪ್ರೀತಿ ಮತ್ತು ಪ್ರಕೃತಿಯಿಂದ ಮಾತ್ರವೇ ಇಂದಿನವರೆಗೂ ಮನುಷ್ಯ ಜೀನವ ಸಾಗಿ ಬಂದಿದೆ. ಲಂಪಟತನವನ್ನು ಮೀರಿ ಜೀವನ ನಡೆಸುವ ಕಡೆಗೆ ನಮ್ಮ ಗುರಿ ಸದಾ ಇರಬೇಕು.ಕಾಲಕ್ಕೆ ತಕ್ಕಂತೆ ಬದಲಾವಣೆಗೆ ಎಲ್ಲರು ಹರಿಕಾರರಾಗಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣ ಪ್ರಾರಂಭಿಸಿರುವ ಸಾಮಾಜಿಕ ಬದಲಾವಣೆ ನಿರಂತರವಾಗಿ ನಡೆಯಬೇಕು. ಆಗ ಮಾತ್ರವೇ ಮನುಷ್ಯ ಕುಲ ಸಾರ್ಥಕತೆ ಪಡೆಯಲು ಸಾಧ್ಯ ಎಂದರು.

ಪ್ರಾಧ್ಯಾಪಕ ಪ್ರಕಾಶ್ ಮಂಟೆದ ಅವರು ಶಿಲ್ಪ,ಸಂದೀಪ್ ದಂಪತಿಗಳಿಗೆ ಕುವೆಂಪು ಅವರ ಮಂತ್ರ ಮಾಂಗಲ್ಯ ಬೋಧಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವಿಶ್ವನಾಥಬಾತಿ,ಆವಲಹಳ್ಳಿಶ್ರೀನಿವಾಸ್, ಗ್ರಾಮ ಪಂಚಾತಿಯಿ ಸದಸ್ಯ ಸಂತೋಷ್, ಸಾದೇನಹಳ್ಳಿ ಚಿಕ್ಕಣ್ಣ, ಹರೀಶ್, ಗೋವಿಂದರಾಜ್, ಚಂದ್ರಶೇಖರ್, ವಿಜಯಕುಮಾರ್ ಅದ್ದೆ, ಹನುಮಂತರಾಜು, ಕಾಕೋಳುಬಾಬು, ನವೀನ್ಸಾದೇನಹಳ್ಳಿ, ದೊಡ್ಡಬ್ಯಾಲಕೆರೆ ಮುನಿರಾಜು, ಮುತ್ತಗದಹಳ್ಳಿರವಿ, ಅರಕೆರೆ ಶ್ರೀನಿವಾಸ್, ಹನುಮಂತರಾಜು, ಲಿಂಗನಹಳ್ಳಿ ಬಸವರಾಜು, ಶ್ರೀರಾಮಪ್ಪತರಹುಣಸೆ, ಕೃಷ್ಣನಾಯಕ್, ಅಶೋಕ್ ಇದ್ದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

7 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

10 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

12 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

12 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

19 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

20 hours ago