ವಿವಾಹದ ಕಟ್ಟುಪಾಡುಗಳು ಇತ್ತೀಚಿನವು- ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು- ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ


ದೊಡ್ಡಬಳ್ಳಾಪುರ: ಪ್ರೀತಿಸುವವರು ದುಖಿಃಸುವಂತಾಗದೆ. ಬಾಳಿದಾಗಲೇ ಪಂಪ ಕವಿಯ ‘ಮನುಷ್ಯ ಜಾತಿ ತಾನೊಂದೇ ವಲಂ’ ಎನ್ನುವ ಮಾತು ಸಾರ್ಥಕವಾಗುತ್ತದೆ ಎಂದು ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ ಹೇಳಿದರು.

ತಾಲ್ಲೂಕಿಗೆ ಸಮೀಪದ ಅದ್ದೆ ಗ್ರಾಮದ ತಿಮ್ಮರಾಯಸ್ವಾಮಿ ದೇವಾಲಯ ಆವರಣದಲ್ಲಿ ಸೋಮವಾರ ಕುವೆಂಪು ಅವರ ಮಂತ್ರಮಾಂಗಲ್ಯದಂತೆ ಸರಳವಾಗಿ ನಡೆದ ಅಂತರ ಜಾತಿ ವಿವಾಹದಲ್ಲಿ ಜೋಡಿಯಾದ ಶಿಲ್ಪ ಮತ್ತು ಸಂದೀಪ್ ಅವರನ್ನು ಆರ್ಶಿವದಿಸಿ ಮಾತನಾಡಿದರು.

ವಿವಾಹದ ಕಟ್ಟುಪಾಡುಗಳು ಇತ್ತೀಚಿನವು. ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು. ಪ್ರೀತಿ ಮತ್ತು ಪ್ರಕೃತಿಯಿಂದ ಮಾತ್ರವೇ ಇಂದಿನವರೆಗೂ ಮನುಷ್ಯ ಜೀನವ ಸಾಗಿ ಬಂದಿದೆ. ಲಂಪಟತನವನ್ನು ಮೀರಿ ಜೀವನ ನಡೆಸುವ ಕಡೆಗೆ ನಮ್ಮ ಗುರಿ ಸದಾ ಇರಬೇಕು.ಕಾಲಕ್ಕೆ ತಕ್ಕಂತೆ ಬದಲಾವಣೆಗೆ ಎಲ್ಲರು ಹರಿಕಾರರಾಗಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣ ಪ್ರಾರಂಭಿಸಿರುವ ಸಾಮಾಜಿಕ ಬದಲಾವಣೆ ನಿರಂತರವಾಗಿ ನಡೆಯಬೇಕು. ಆಗ ಮಾತ್ರವೇ ಮನುಷ್ಯ ಕುಲ ಸಾರ್ಥಕತೆ ಪಡೆಯಲು ಸಾಧ್ಯ ಎಂದರು.

ಪ್ರಾಧ್ಯಾಪಕ ಪ್ರಕಾಶ್ ಮಂಟೆದ ಅವರು ಶಿಲ್ಪ,ಸಂದೀಪ್ ದಂಪತಿಗಳಿಗೆ ಕುವೆಂಪು ಅವರ ಮಂತ್ರ ಮಾಂಗಲ್ಯ ಬೋಧಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವಿಶ್ವನಾಥಬಾತಿ,ಆವಲಹಳ್ಳಿಶ್ರೀನಿವಾಸ್, ಗ್ರಾಮ ಪಂಚಾತಿಯಿ ಸದಸ್ಯ ಸಂತೋಷ್, ಸಾದೇನಹಳ್ಳಿ ಚಿಕ್ಕಣ್ಣ, ಹರೀಶ್, ಗೋವಿಂದರಾಜ್, ಚಂದ್ರಶೇಖರ್, ವಿಜಯಕುಮಾರ್ ಅದ್ದೆ, ಹನುಮಂತರಾಜು, ಕಾಕೋಳುಬಾಬು, ನವೀನ್ಸಾದೇನಹಳ್ಳಿ, ದೊಡ್ಡಬ್ಯಾಲಕೆರೆ ಮುನಿರಾಜು, ಮುತ್ತಗದಹಳ್ಳಿರವಿ, ಅರಕೆರೆ ಶ್ರೀನಿವಾಸ್, ಹನುಮಂತರಾಜು, ಲಿಂಗನಹಳ್ಳಿ ಬಸವರಾಜು, ಶ್ರೀರಾಮಪ್ಪತರಹುಣಸೆ, ಕೃಷ್ಣನಾಯಕ್, ಅಶೋಕ್ ಇದ್ದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

18 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago