ವಿವಾಹದ ಕಟ್ಟುಪಾಡುಗಳು ಇತ್ತೀಚಿನವು- ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು- ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ


ದೊಡ್ಡಬಳ್ಳಾಪುರ: ಪ್ರೀತಿಸುವವರು ದುಖಿಃಸುವಂತಾಗದೆ. ಬಾಳಿದಾಗಲೇ ಪಂಪ ಕವಿಯ ‘ಮನುಷ್ಯ ಜಾತಿ ತಾನೊಂದೇ ವಲಂ’ ಎನ್ನುವ ಮಾತು ಸಾರ್ಥಕವಾಗುತ್ತದೆ ಎಂದು ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ ಹೇಳಿದರು.

ತಾಲ್ಲೂಕಿಗೆ ಸಮೀಪದ ಅದ್ದೆ ಗ್ರಾಮದ ತಿಮ್ಮರಾಯಸ್ವಾಮಿ ದೇವಾಲಯ ಆವರಣದಲ್ಲಿ ಸೋಮವಾರ ಕುವೆಂಪು ಅವರ ಮಂತ್ರಮಾಂಗಲ್ಯದಂತೆ ಸರಳವಾಗಿ ನಡೆದ ಅಂತರ ಜಾತಿ ವಿವಾಹದಲ್ಲಿ ಜೋಡಿಯಾದ ಶಿಲ್ಪ ಮತ್ತು ಸಂದೀಪ್ ಅವರನ್ನು ಆರ್ಶಿವದಿಸಿ ಮಾತನಾಡಿದರು.

ವಿವಾಹದ ಕಟ್ಟುಪಾಡುಗಳು ಇತ್ತೀಚಿನವು. ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು. ಪ್ರೀತಿ ಮತ್ತು ಪ್ರಕೃತಿಯಿಂದ ಮಾತ್ರವೇ ಇಂದಿನವರೆಗೂ ಮನುಷ್ಯ ಜೀನವ ಸಾಗಿ ಬಂದಿದೆ. ಲಂಪಟತನವನ್ನು ಮೀರಿ ಜೀವನ ನಡೆಸುವ ಕಡೆಗೆ ನಮ್ಮ ಗುರಿ ಸದಾ ಇರಬೇಕು.ಕಾಲಕ್ಕೆ ತಕ್ಕಂತೆ ಬದಲಾವಣೆಗೆ ಎಲ್ಲರು ಹರಿಕಾರರಾಗಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣ ಪ್ರಾರಂಭಿಸಿರುವ ಸಾಮಾಜಿಕ ಬದಲಾವಣೆ ನಿರಂತರವಾಗಿ ನಡೆಯಬೇಕು. ಆಗ ಮಾತ್ರವೇ ಮನುಷ್ಯ ಕುಲ ಸಾರ್ಥಕತೆ ಪಡೆಯಲು ಸಾಧ್ಯ ಎಂದರು.

ಪ್ರಾಧ್ಯಾಪಕ ಪ್ರಕಾಶ್ ಮಂಟೆದ ಅವರು ಶಿಲ್ಪ,ಸಂದೀಪ್ ದಂಪತಿಗಳಿಗೆ ಕುವೆಂಪು ಅವರ ಮಂತ್ರ ಮಾಂಗಲ್ಯ ಬೋಧಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವಿಶ್ವನಾಥಬಾತಿ,ಆವಲಹಳ್ಳಿಶ್ರೀನಿವಾಸ್, ಗ್ರಾಮ ಪಂಚಾತಿಯಿ ಸದಸ್ಯ ಸಂತೋಷ್, ಸಾದೇನಹಳ್ಳಿ ಚಿಕ್ಕಣ್ಣ, ಹರೀಶ್, ಗೋವಿಂದರಾಜ್, ಚಂದ್ರಶೇಖರ್, ವಿಜಯಕುಮಾರ್ ಅದ್ದೆ, ಹನುಮಂತರಾಜು, ಕಾಕೋಳುಬಾಬು, ನವೀನ್ಸಾದೇನಹಳ್ಳಿ, ದೊಡ್ಡಬ್ಯಾಲಕೆರೆ ಮುನಿರಾಜು, ಮುತ್ತಗದಹಳ್ಳಿರವಿ, ಅರಕೆರೆ ಶ್ರೀನಿವಾಸ್, ಹನುಮಂತರಾಜು, ಲಿಂಗನಹಳ್ಳಿ ಬಸವರಾಜು, ಶ್ರೀರಾಮಪ್ಪತರಹುಣಸೆ, ಕೃಷ್ಣನಾಯಕ್, ಅಶೋಕ್ ಇದ್ದರು.

Ramesh Babu

Journalist

Recent Posts

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

37 minutes ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

4 hours ago

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

9 hours ago

ತಿರುಮಗೊಂಡಹಳ್ಳಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಘಾಟಿ ಪ್ರಾಧಿಕಾರದ ಸದಸ್ಯರ ಮನವಿ

ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ‌‌ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…

21 hours ago

ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ ಆರ್‌ಟಿಐ ಅರ್ಜಿಗಳ ವಿಲೇವಾರಿ ವಿಳಂಬ- ಮಾಹಿತಿ ಆಯುಕ್ತ ಹರೀಶ್ ಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…

23 hours ago

ಧರ್ಮಸ್ಥಳ ಕೇಸ್ ವಿಚಾರ: ತನಿಖೆ ಬೇಗ ಮುಗಿಸಿ ನ್ಯಾಯ ಕೊಡಿಸಿ ಭಾರತೀಯ ಪರಂಪರೆಯನ್ನ ಉಳಿಸಬೇಕು- ಸಚಿವ ವಿ.ಸೋಮಣ್ಣ

ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…

24 hours ago