ವಿವಾಹದ ಕಟ್ಟುಪಾಡುಗಳು ಇತ್ತೀಚಿನವು- ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು- ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ


ದೊಡ್ಡಬಳ್ಳಾಪುರ: ಪ್ರೀತಿಸುವವರು ದುಖಿಃಸುವಂತಾಗದೆ. ಬಾಳಿದಾಗಲೇ ಪಂಪ ಕವಿಯ ‘ಮನುಷ್ಯ ಜಾತಿ ತಾನೊಂದೇ ವಲಂ’ ಎನ್ನುವ ಮಾತು ಸಾರ್ಥಕವಾಗುತ್ತದೆ ಎಂದು ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ ಹೇಳಿದರು.

ತಾಲ್ಲೂಕಿಗೆ ಸಮೀಪದ ಅದ್ದೆ ಗ್ರಾಮದ ತಿಮ್ಮರಾಯಸ್ವಾಮಿ ದೇವಾಲಯ ಆವರಣದಲ್ಲಿ ಸೋಮವಾರ ಕುವೆಂಪು ಅವರ ಮಂತ್ರಮಾಂಗಲ್ಯದಂತೆ ಸರಳವಾಗಿ ನಡೆದ ಅಂತರ ಜಾತಿ ವಿವಾಹದಲ್ಲಿ ಜೋಡಿಯಾದ ಶಿಲ್ಪ ಮತ್ತು ಸಂದೀಪ್ ಅವರನ್ನು ಆರ್ಶಿವದಿಸಿ ಮಾತನಾಡಿದರು.

ವಿವಾಹದ ಕಟ್ಟುಪಾಡುಗಳು ಇತ್ತೀಚಿನವು. ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು. ಪ್ರೀತಿ ಮತ್ತು ಪ್ರಕೃತಿಯಿಂದ ಮಾತ್ರವೇ ಇಂದಿನವರೆಗೂ ಮನುಷ್ಯ ಜೀನವ ಸಾಗಿ ಬಂದಿದೆ. ಲಂಪಟತನವನ್ನು ಮೀರಿ ಜೀವನ ನಡೆಸುವ ಕಡೆಗೆ ನಮ್ಮ ಗುರಿ ಸದಾ ಇರಬೇಕು.ಕಾಲಕ್ಕೆ ತಕ್ಕಂತೆ ಬದಲಾವಣೆಗೆ ಎಲ್ಲರು ಹರಿಕಾರರಾಗಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣ ಪ್ರಾರಂಭಿಸಿರುವ ಸಾಮಾಜಿಕ ಬದಲಾವಣೆ ನಿರಂತರವಾಗಿ ನಡೆಯಬೇಕು. ಆಗ ಮಾತ್ರವೇ ಮನುಷ್ಯ ಕುಲ ಸಾರ್ಥಕತೆ ಪಡೆಯಲು ಸಾಧ್ಯ ಎಂದರು.

ಪ್ರಾಧ್ಯಾಪಕ ಪ್ರಕಾಶ್ ಮಂಟೆದ ಅವರು ಶಿಲ್ಪ,ಸಂದೀಪ್ ದಂಪತಿಗಳಿಗೆ ಕುವೆಂಪು ಅವರ ಮಂತ್ರ ಮಾಂಗಲ್ಯ ಬೋಧಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವಿಶ್ವನಾಥಬಾತಿ,ಆವಲಹಳ್ಳಿಶ್ರೀನಿವಾಸ್, ಗ್ರಾಮ ಪಂಚಾತಿಯಿ ಸದಸ್ಯ ಸಂತೋಷ್, ಸಾದೇನಹಳ್ಳಿ ಚಿಕ್ಕಣ್ಣ, ಹರೀಶ್, ಗೋವಿಂದರಾಜ್, ಚಂದ್ರಶೇಖರ್, ವಿಜಯಕುಮಾರ್ ಅದ್ದೆ, ಹನುಮಂತರಾಜು, ಕಾಕೋಳುಬಾಬು, ನವೀನ್ಸಾದೇನಹಳ್ಳಿ, ದೊಡ್ಡಬ್ಯಾಲಕೆರೆ ಮುನಿರಾಜು, ಮುತ್ತಗದಹಳ್ಳಿರವಿ, ಅರಕೆರೆ ಶ್ರೀನಿವಾಸ್, ಹನುಮಂತರಾಜು, ಲಿಂಗನಹಳ್ಳಿ ಬಸವರಾಜು, ಶ್ರೀರಾಮಪ್ಪತರಹುಣಸೆ, ಕೃಷ್ಣನಾಯಕ್, ಅಶೋಕ್ ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

7 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

17 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

18 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago