ದೊಡ್ಡಬಳ್ಳಾಪುರ: ಪ್ರೀತಿಸುವವರು ದುಖಿಃಸುವಂತಾಗದೆ. ಬಾಳಿದಾಗಲೇ ಪಂಪ ಕವಿಯ ‘ಮನುಷ್ಯ ಜಾತಿ ತಾನೊಂದೇ ವಲಂ’ ಎನ್ನುವ ಮಾತು ಸಾರ್ಥಕವಾಗುತ್ತದೆ ಎಂದು ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ ಹೇಳಿದರು.
ತಾಲ್ಲೂಕಿಗೆ ಸಮೀಪದ ಅದ್ದೆ ಗ್ರಾಮದ ತಿಮ್ಮರಾಯಸ್ವಾಮಿ ದೇವಾಲಯ ಆವರಣದಲ್ಲಿ ಸೋಮವಾರ ಕುವೆಂಪು ಅವರ ಮಂತ್ರಮಾಂಗಲ್ಯದಂತೆ ಸರಳವಾಗಿ ನಡೆದ ಅಂತರ ಜಾತಿ ವಿವಾಹದಲ್ಲಿ ಜೋಡಿಯಾದ ಶಿಲ್ಪ ಮತ್ತು ಸಂದೀಪ್ ಅವರನ್ನು ಆರ್ಶಿವದಿಸಿ ಮಾತನಾಡಿದರು.
ವಿವಾಹದ ಕಟ್ಟುಪಾಡುಗಳು ಇತ್ತೀಚಿನವು. ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು. ಪ್ರೀತಿ ಮತ್ತು ಪ್ರಕೃತಿಯಿಂದ ಮಾತ್ರವೇ ಇಂದಿನವರೆಗೂ ಮನುಷ್ಯ ಜೀನವ ಸಾಗಿ ಬಂದಿದೆ. ಲಂಪಟತನವನ್ನು ಮೀರಿ ಜೀವನ ನಡೆಸುವ ಕಡೆಗೆ ನಮ್ಮ ಗುರಿ ಸದಾ ಇರಬೇಕು.ಕಾಲಕ್ಕೆ ತಕ್ಕಂತೆ ಬದಲಾವಣೆಗೆ ಎಲ್ಲರು ಹರಿಕಾರರಾಗಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣ ಪ್ರಾರಂಭಿಸಿರುವ ಸಾಮಾಜಿಕ ಬದಲಾವಣೆ ನಿರಂತರವಾಗಿ ನಡೆಯಬೇಕು. ಆಗ ಮಾತ್ರವೇ ಮನುಷ್ಯ ಕುಲ ಸಾರ್ಥಕತೆ ಪಡೆಯಲು ಸಾಧ್ಯ ಎಂದರು.
ಪ್ರಾಧ್ಯಾಪಕ ಪ್ರಕಾಶ್ ಮಂಟೆದ ಅವರು ಶಿಲ್ಪ,ಸಂದೀಪ್ ದಂಪತಿಗಳಿಗೆ ಕುವೆಂಪು ಅವರ ಮಂತ್ರ ಮಾಂಗಲ್ಯ ಬೋಧಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವಿಶ್ವನಾಥಬಾತಿ,ಆವಲಹಳ್ಳಿಶ್ರೀನಿವಾಸ್, ಗ್ರಾಮ ಪಂಚಾತಿಯಿ ಸದಸ್ಯ ಸಂತೋಷ್, ಸಾದೇನಹಳ್ಳಿ ಚಿಕ್ಕಣ್ಣ, ಹರೀಶ್, ಗೋವಿಂದರಾಜ್, ಚಂದ್ರಶೇಖರ್, ವಿಜಯಕುಮಾರ್ ಅದ್ದೆ, ಹನುಮಂತರಾಜು, ಕಾಕೋಳುಬಾಬು, ನವೀನ್ಸಾದೇನಹಳ್ಳಿ, ದೊಡ್ಡಬ್ಯಾಲಕೆರೆ ಮುನಿರಾಜು, ಮುತ್ತಗದಹಳ್ಳಿರವಿ, ಅರಕೆರೆ ಶ್ರೀನಿವಾಸ್, ಹನುಮಂತರಾಜು, ಲಿಂಗನಹಳ್ಳಿ ಬಸವರಾಜು, ಶ್ರೀರಾಮಪ್ಪತರಹುಣಸೆ, ಕೃಷ್ಣನಾಯಕ್, ಅಶೋಕ್ ಇದ್ದರು.
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…