ದೊಡ್ಡಬಳ್ಳಾಪುರ: ಪ್ರೀತಿಸುವವರು ದುಖಿಃಸುವಂತಾಗದೆ. ಬಾಳಿದಾಗಲೇ ಪಂಪ ಕವಿಯ ‘ಮನುಷ್ಯ ಜಾತಿ ತಾನೊಂದೇ ವಲಂ’ ಎನ್ನುವ ಮಾತು ಸಾರ್ಥಕವಾಗುತ್ತದೆ ಎಂದು ಪ್ರಗತಿಪರ ಚಿಂತಕ ಮಂಜುನಾಥ ಅದ್ದೆ ಹೇಳಿದರು.
ತಾಲ್ಲೂಕಿಗೆ ಸಮೀಪದ ಅದ್ದೆ ಗ್ರಾಮದ ತಿಮ್ಮರಾಯಸ್ವಾಮಿ ದೇವಾಲಯ ಆವರಣದಲ್ಲಿ ಸೋಮವಾರ ಕುವೆಂಪು ಅವರ ಮಂತ್ರಮಾಂಗಲ್ಯದಂತೆ ಸರಳವಾಗಿ ನಡೆದ ಅಂತರ ಜಾತಿ ವಿವಾಹದಲ್ಲಿ ಜೋಡಿಯಾದ ಶಿಲ್ಪ ಮತ್ತು ಸಂದೀಪ್ ಅವರನ್ನು ಆರ್ಶಿವದಿಸಿ ಮಾತನಾಡಿದರು.
ವಿವಾಹದ ಕಟ್ಟುಪಾಡುಗಳು ಇತ್ತೀಚಿನವು. ನಮಗೆ ಜಾತಿ ಮೀರಿದ ಬದುಕು ಮುಖ್ಯವಾಗಬೇಕು. ಪ್ರೀತಿ ಮತ್ತು ಪ್ರಕೃತಿಯಿಂದ ಮಾತ್ರವೇ ಇಂದಿನವರೆಗೂ ಮನುಷ್ಯ ಜೀನವ ಸಾಗಿ ಬಂದಿದೆ. ಲಂಪಟತನವನ್ನು ಮೀರಿ ಜೀವನ ನಡೆಸುವ ಕಡೆಗೆ ನಮ್ಮ ಗುರಿ ಸದಾ ಇರಬೇಕು.ಕಾಲಕ್ಕೆ ತಕ್ಕಂತೆ ಬದಲಾವಣೆಗೆ ಎಲ್ಲರು ಹರಿಕಾರರಾಗಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣ ಪ್ರಾರಂಭಿಸಿರುವ ಸಾಮಾಜಿಕ ಬದಲಾವಣೆ ನಿರಂತರವಾಗಿ ನಡೆಯಬೇಕು. ಆಗ ಮಾತ್ರವೇ ಮನುಷ್ಯ ಕುಲ ಸಾರ್ಥಕತೆ ಪಡೆಯಲು ಸಾಧ್ಯ ಎಂದರು.
ಪ್ರಾಧ್ಯಾಪಕ ಪ್ರಕಾಶ್ ಮಂಟೆದ ಅವರು ಶಿಲ್ಪ,ಸಂದೀಪ್ ದಂಪತಿಗಳಿಗೆ ಕುವೆಂಪು ಅವರ ಮಂತ್ರ ಮಾಂಗಲ್ಯ ಬೋಧಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವಿಶ್ವನಾಥಬಾತಿ,ಆವಲಹಳ್ಳಿಶ್ರೀನಿವಾಸ್, ಗ್ರಾಮ ಪಂಚಾತಿಯಿ ಸದಸ್ಯ ಸಂತೋಷ್, ಸಾದೇನಹಳ್ಳಿ ಚಿಕ್ಕಣ್ಣ, ಹರೀಶ್, ಗೋವಿಂದರಾಜ್, ಚಂದ್ರಶೇಖರ್, ವಿಜಯಕುಮಾರ್ ಅದ್ದೆ, ಹನುಮಂತರಾಜು, ಕಾಕೋಳುಬಾಬು, ನವೀನ್ಸಾದೇನಹಳ್ಳಿ, ದೊಡ್ಡಬ್ಯಾಲಕೆರೆ ಮುನಿರಾಜು, ಮುತ್ತಗದಹಳ್ಳಿರವಿ, ಅರಕೆರೆ ಶ್ರೀನಿವಾಸ್, ಹನುಮಂತರಾಜು, ಲಿಂಗನಹಳ್ಳಿ ಬಸವರಾಜು, ಶ್ರೀರಾಮಪ್ಪತರಹುಣಸೆ, ಕೃಷ್ಣನಾಯಕ್, ಅಶೋಕ್ ಇದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…