ವಿವಿಧ ಇಲಾಖೆಗಳಲ್ಲಿ 34,863 ಹುದ್ದೆಗಳು ಖಾಲಿ: ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ- ಸಿಎಂ ಸಿದ್ದರಾಮಯ್ಯ

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದರು.

ಯುಪಿಎಸ್‌ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು‌ ಎಂದು ಸೂಚಿಸಿದರು.

ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಬೇಕು ಎಂದರು.

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಬೇಕು ಎಂದು ಹೇಳಿದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

13 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

22 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

23 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago