ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದರು.
ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್ಸಿ ಕೇವಲ ಗ್ರೂಪ್ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್ ಸಿದ್ಧಪಡಿಸಬೇಕು ಎಂದು ಸೂಚಿಸಿದರು.
ಪಿಎಸ್ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಬೇಕು ಎಂದರು.
ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್ ಆರ್ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್ ಆರ್ ಸಿದ್ಧಪಡಿಸಬೇಕು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…