ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದರು.
ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್ಸಿ ಕೇವಲ ಗ್ರೂಪ್ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್ ಸಿದ್ಧಪಡಿಸಬೇಕು ಎಂದು ಸೂಚಿಸಿದರು.
ಪಿಎಸ್ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಬೇಕು ಎಂದರು.
ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್ ಆರ್ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್ ಆರ್ ಸಿದ್ಧಪಡಿಸಬೇಕು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…