ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು. ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಐದು ಪ್ರಕರಣಗಳಿಗೆ ಸೇರಿದ ₹70 ಲಕ್ಷ ಮೌಲ್ಯದ 1 ಕೆ.ಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಇತರೆ ಮೂವರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದರು.
ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬೆಂಗಳೂರು ನಗರ ಪೊಲೀಸರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದರು.
ಇದೇ ರೀತಿ ಬೆಳ್ಳಂದೂರು ಪೊಲೀಸ್ ಠಾಣೆ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿ ₹22,50,000 ಮೌಲ್ಯದ 322 ಗ್ರಾಮ್ ಚಿನ್ನಾಭರಣ ಹಾಗೂ 71 ಗ್ರಾಮ್ ಕೃತಕ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದರು.
ಸಂಪಂಗಿರಾಮನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಚಿನ್ನದ ಮಳಿಗೆಯಲ್ಲಿ ಮಾಜಿ ಉದ್ಯೋಗಿ ಹಾಗೂ ಆತನ ಸಹಚರರನ್ನು ಕಳ್ಳತನದ ಆರೋಪದ ಮೇಲೆ ಬಂಧಿಸಿದ್ದಾರೆ. ಇವರಿಂದ ₹51.8 ಲಕ್ಷ ಮೌಲ್ಯದ 740 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಪರಾರಿಯಾಗಿರುವ ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಹೇಳಿದರು.
ಷೇರು ಮಾರಾಟ ಹಗರಣಕ್ಕೆ ಸಂಬಂಧಿಸಿದಂತೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಆಕ್ಸಿಸ್ ಬ್ಯಾಂಕಿನ ಮ್ಯಾನೇಜರ್, ಮೂವರು ಸೇಲ್ಸ್ ಎಕ್ಷಿಕ್ಯೂಟಿವ್ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆಯಿಂದ ದೇಶದ ವಿವಿಧ ಭಾಗಗಳಲ್ಲಿ ಇಂತಹ 254 ಪ್ರಕರಣಗಳು ದಾಖಲಾಗಿವೆ. ಬಂಧಿತರು ತೆರೆದಿದ್ದ 6 ಬ್ಯಾಂಕ್ ಖಾತೆಗಳಲ್ಲಿ ₹97 ಕೋಟಿಯಷ್ಟು ವರ್ಗಾವಣೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ 9 ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದರು.
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…