ವಿವಿಧ ಕಳ್ಳತನ ಪ್ರಕರಣ: ಅಪಾರ ಮೌಲ್ಯದ ನಗದು, ಚಿನ್ನಾಭರಣ ವಶ

ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು. ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಐದು ಪ್ರಕರಣಗಳಿಗೆ ಸೇರಿದ ₹70 ಲಕ್ಷ ಮೌಲ್ಯದ 1 ಕೆ.ಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಇತರೆ ಮೂವರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದರು.

ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬೆಂಗಳೂರು ನಗರ ಪೊಲೀಸರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದರು.

ವಿವಿ ಪುರ ಪೊಲೀಸ್ ಠಾಣೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿ ₹1,22,78,000 ಮೌಲ್ಯದ 1 ಕೆ.ಜಿ 570 ಗ್ರಾಮ್ ಚಿನ್ನ ಹಾಗೂ ವಜ್ರಾಭರಣ ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ರೀತಿ ಬೆಳ್ಳಂದೂರು ಪೊಲೀಸ್ ಠಾಣೆ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿ ₹22,50,000 ಮೌಲ್ಯದ 322 ಗ್ರಾಮ್ ಚಿನ್ನಾಭರಣ ಹಾಗೂ 71 ಗ್ರಾಮ್ ಕೃತಕ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದರು.

ಸಂಪಂಗಿರಾಮನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಚಿನ್ನದ ಮಳಿಗೆಯಲ್ಲಿ ಮಾಜಿ ಉದ್ಯೋಗಿ ಹಾಗೂ ಆತನ ಸಹಚರರನ್ನು ಕಳ್ಳತನದ ಆರೋಪದ ಮೇಲೆ ಬಂಧಿಸಿದ್ದಾರೆ. ಇವರಿಂದ ₹51.8 ಲಕ್ಷ ಮೌಲ್ಯದ 740 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಪರಾರಿಯಾಗಿರುವ ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಹೇಳಿದರು.

ಷೇರು ಮಾರಾಟ ಹಗರಣಕ್ಕೆ ಸಂಬಂಧಿಸಿದಂತೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಆಕ್ಸಿಸ್ ಬ್ಯಾಂಕಿನ ಮ್ಯಾನೇಜರ್, ಮೂವರು ಸೇಲ್ಸ್ ಎಕ್ಷಿಕ್ಯೂಟಿವ್ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆಯಿಂದ ದೇಶದ ವಿವಿಧ ಭಾಗಗಳಲ್ಲಿ ಇಂತಹ 254 ಪ್ರಕರಣಗಳು ದಾಖಲಾಗಿವೆ. ಬಂಧಿತರು ತೆರೆದಿದ್ದ 6 ಬ್ಯಾಂಕ್ ಖಾತೆಗಳಲ್ಲಿ ₹97 ಕೋಟಿಯಷ್ಟು ವರ್ಗಾವಣೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ 9 ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದರು.

ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ₹9 ಲಕ್ಷ ಮೌಲ್ಯದ 120 ಗ್ರಾಂ ಚಿನ್ನಾಭರಣ ಹಾಗೂ ಅಪರಾಧಕ್ಕೆ ಬಳಸಿದ್ದ ಒಂದು ದ್ವಿಚಕ್ರವಾಹನ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಪ್ರಸ್ತುತ ರಾಜ್ಯದ ಬರ ಪರಿಸ್ಥಿತಿಯ ವಿವರಗಳು ಇಂತಿವೆ….

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ‌ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…

5 hours ago

ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…

5 hours ago

ಆಸರೆ–ಸನ್ಮಿತ್ರ ಯೋಜನೆಯಡಿ ವಯೋವೃದ್ಧರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆಸರೆ–ಸನ್ಮಿತ್ರ ಸಹಕಾರಿ- ಎಎಸ್ಪಿ ವೆಂಕಟೇಶ್ ಪ್ರಸನ್ನ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಆಸರೆ–ಸನ್ಮಿತ್ರ ಯೋಜನೆಯಡಿ…

10 hours ago

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ……

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…

18 hours ago

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

  ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…

1 day ago

ನಗರಸಭೆ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆ: ಗಣ್ಯರಿಂದ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…

1 day ago