ವಿವಿಧ ಕಳ್ಳತನ ಪ್ರಕರಣ: ಅಪಾರ ಮೌಲ್ಯದ ನಗದು, ಚಿನ್ನಾಭರಣ ವಶ

ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು. ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಐದು ಪ್ರಕರಣಗಳಿಗೆ ಸೇರಿದ ₹70 ಲಕ್ಷ ಮೌಲ್ಯದ 1 ಕೆ.ಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಇತರೆ ಮೂವರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದರು.

ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬೆಂಗಳೂರು ನಗರ ಪೊಲೀಸರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದರು.

ವಿವಿ ಪುರ ಪೊಲೀಸ್ ಠಾಣೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿ ₹1,22,78,000 ಮೌಲ್ಯದ 1 ಕೆ.ಜಿ 570 ಗ್ರಾಮ್ ಚಿನ್ನ ಹಾಗೂ ವಜ್ರಾಭರಣ ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಇದೇ ರೀತಿ ಬೆಳ್ಳಂದೂರು ಪೊಲೀಸ್ ಠಾಣೆ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿ ₹22,50,000 ಮೌಲ್ಯದ 322 ಗ್ರಾಮ್ ಚಿನ್ನಾಭರಣ ಹಾಗೂ 71 ಗ್ರಾಮ್ ಕೃತಕ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದರು.

ಸಂಪಂಗಿರಾಮನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಚಿನ್ನದ ಮಳಿಗೆಯಲ್ಲಿ ಮಾಜಿ ಉದ್ಯೋಗಿ ಹಾಗೂ ಆತನ ಸಹಚರರನ್ನು ಕಳ್ಳತನದ ಆರೋಪದ ಮೇಲೆ ಬಂಧಿಸಿದ್ದಾರೆ. ಇವರಿಂದ ₹51.8 ಲಕ್ಷ ಮೌಲ್ಯದ 740 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಪರಾರಿಯಾಗಿರುವ ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಹೇಳಿದರು.

ಷೇರು ಮಾರಾಟ ಹಗರಣಕ್ಕೆ ಸಂಬಂಧಿಸಿದಂತೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಆಕ್ಸಿಸ್ ಬ್ಯಾಂಕಿನ ಮ್ಯಾನೇಜರ್, ಮೂವರು ಸೇಲ್ಸ್ ಎಕ್ಷಿಕ್ಯೂಟಿವ್ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆಯಿಂದ ದೇಶದ ವಿವಿಧ ಭಾಗಗಳಲ್ಲಿ ಇಂತಹ 254 ಪ್ರಕರಣಗಳು ದಾಖಲಾಗಿವೆ. ಬಂಧಿತರು ತೆರೆದಿದ್ದ 6 ಬ್ಯಾಂಕ್ ಖಾತೆಗಳಲ್ಲಿ ₹97 ಕೋಟಿಯಷ್ಟು ವರ್ಗಾವಣೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ 9 ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದರು.

ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ₹9 ಲಕ್ಷ ಮೌಲ್ಯದ 120 ಗ್ರಾಂ ಚಿನ್ನಾಭರಣ ಹಾಗೂ ಅಪರಾಧಕ್ಕೆ ಬಳಸಿದ್ದ ಒಂದು ದ್ವಿಚಕ್ರವಾಹನ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

2 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago