ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯತಿ (ತೆರವಾಗಿರುವ ಸ್ಥಾನ), ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಕೆಸ್ತೂರು ಗ್ರಾಮ ಪಂಚಾಯತಿಗೆ ಉಪ ಚುನಾವಣೆಯನ್ನು ನಡೆಸಲು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.
ಚುನಾವಣಾ ವೇಳಾಪಟ್ಟಿಯಂತೆ 2023ರ ಜುಲೈ 12 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು, ಜುಲೈ 13 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಜುಲೈ 15 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜುಲೈ 23 ರಂದು ಮತದಾನ ಅವಶ್ಯವಿದ್ದರೆ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದೆ.
ಜುಲೈ 25 ರಂದು ಮರು ಮತದಾನ ಅವಶ್ಯವಿದ್ದರೆ, ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮರುಮತದಾನ ನಡೆಯಲಿದೆ. ಜುಲೈ 26 ರ ಬುಧವಾರದಂದು ಅಯಾ ತಾಲ್ಲೂಕು ಕೇಂದ್ರ ಸ್ಥಳಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಮತಗಳ ಏಣಿಕೆ ಕಾರ್ಯ ನಡೆಯಲಿದ್ದು, ಜುಲೈ 26 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…