ವಿವಿಧ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ನವೆಂಬರ್‌ ಮೊದಲ ವಾರದಲ್ಲಿ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ- ಸಿಎಂ ಸಿದ್ದರಾಮಯ್ಯ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು…

10 hours ago

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅದ್ಧೂರಿಯಾಗಿ ನಡೆದ “ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ” (ವಿಜ್ಞಾನ ಮೇಳ), ಕಿಡ್ಸ್ ಕಾರ್ನಿವಲ್: ವಿಜ್ಞಾನ ಮೇಳವನ್ನು ಉದ್ಘಾಟಿಸಿದ ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿನ ಕರೆನಹಳ್ಳಿಯಲ್ಲಿರುವ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿಂದು "ಸೈನ್ಸ್ ಫೆಸ್ಟ್ – ಇನೋವೇಟಿವ್ ಅರೇನ" (ವಿಜ್ಞಾನ ಮೇಳ) ವನ್ನು ಆಯೋಜಿಸಲಾಗಿತ್ತು.…

12 hours ago

ಶಿವ ಶಿವ ಶಿವ ಶಿವ……ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌…..

ಶಿವರಾತ್ರಿ....... ಶಿವರಾತ್ರಿಯ ಶಿವ - ರಂಜಾನ್ ಅಲ್ಲಾ - ಕ್ರಿಸ್ಮಸ್ ಯೇಸು ನಾಮ ಸ್ಮರಣೆ..... ಶಿವ ಶಿವ ಶಿವ ಶಿವ......…

19 hours ago

ಬೈರಸಂದ್ರದಲ್ಲಿ ಹಂದಿ ಶೆಡ್‌ ಸ್ಥಳಾಂತರಕ್ಕೆ ಒತ್ತಾಯ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಗ್ರಾಪಂ ವ್ಯಾಪ್ತಿಯ ಬೈರಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಹಂದಿ ಸಾಕಣೆ ಶೆಡ್ ನಿಂದಾಗಿ ಗ್ರಾಮಸ್ಥರಿಗೆ ತೊಂದರೆಗಳಾಗುತ್ತಿದ್ದು,…

20 hours ago

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ‌ ಶಾಲೆ ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, (ರಾಜ್ಯ ಪಠ್ಯಕ್ರಮ)…

1 day ago

ರೈತನ ಬಾಳೆ ತೋಟ ಮಾರಣಹೋಮ: ಕಿಡಿಗೇಡಿಗಳ ಕಿಡಿಗೇಡಿತನಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳು ನಾಶ: ಸಂಕಷ್ಟದಲ್ಲಿ ರೈತ

ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು…

1 day ago