ವಿವಿಧ ಪ್ರಕರಣಗಳನ್ನು ಬೇಧಿಸಿದ ಬೆಂಗಳೂರು ನಗರ ಪೊಲೀಸರು:‌ ಬಂಧಿತರಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ವಾಹನ, ಮೊಬೈಲ್ ಫೋನ್ ವಶ

ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಅಧಿಕಾರಿಗಳು ಆರೋಪಿಯೊಬ್ಬನನ್ನು ಬಂಧಿಸಿ, ಬಂಧಿತನಿಂದ ₹8 ಲಕ್ಷ ಮೌಲ್ಯದ 101 ಗ್ರಾಂ ಚಿನ್ನಾಭರಣ, 2 ಲ್ಯಾಪ್ ಟಾಪ್ ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.

ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಣ್ಯ ಪೊಲೀಸರು ನಾಲ್ವರು ಕುಖ್ಯಾತ ಬಾಲಕರನ್ನು ಬಂಧಿಸಿದ್ದಾರೆ. ಬಂಧಿತರಿಂದ 30 ಗ್ರಾಂ ಚಿನ್ನದ ಸರ, ಆಟೋ ರಿಕ್ಷಾ, ದ್ವಿಚಕ್ರ ವಾಹನ ಸೇರಿದಂತೆ ಒಟ್ಟು ₹4 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತಹಳ್ಳಿ ಪೊಲೀಸರು ಮನೆ ಕೆಲಸದವಳು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮನೆ ಕೆಲಸದಾಕೆ ಮನೆಯಲ್ಲಿ ಒಂದು ವಾಚ್ ಹಾಗೂ ಚಿನ್ನದ ಸರ ಪತ್ತೆಯಾಗಿದ್ದು, ಕಳ್ಳತನವಾದ ₹30 ಲಕ್ಷ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಈಜಿಪುರದ ವಿವಿಧ ಚಿನ್ನಾಭರಣ ಮಳಿಗೆಗಳಿಂದ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ರಾಮಮೂರ್ತಿ ನಗರ ಪೊಲೀಸರು ಸ್ಥಳೀಯ ಶೋರೂಮ್ ನಲ್ಲಿ 4 ಲ್ಯಾಪ್ ಟಾಪ್ ಮತ್ತು 11 ಹೆಚ್ ಪಿ ಪೆನ್ ಡ್ರೈವ್ ಗಳನ್ನು ಕಳ್ಳತನ ಮಾಡಿ ಬೇರೆಯವರಿಗೆ ಮಾರಾಟ ಮಾಡಿದ್ದ ಆರೋಪದ ಮೇಲೆ ಸೆಲ್ಸ್ ಎಕ್ಸಿಕ್ಯೂಟಿವ್ ನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆರೋಪಿಯು ತನ್ನ ಮನೆಯಲ್ಲಿ ಉಳಿದ 3 ಲ್ಯಾಪ್ ಟಾಪ್ ಮತ್ತು 5 ಹೆಚ್ ಪಿ ಪೆನ್ ಡ್ರೈವ್ ಗಳು ಹೊಂದಿರುವುದಾಗಿ ತಿಳಿಸಿದ ಮೇರೆಗೆ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಸರಣಿ ಮೊಬೈಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್ ಫೀಲ್ಡ್ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ ₹4.50 ಲಕ್ಷ ಮೌಲ್ಯದ 32 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಮೊಬೈಲ್ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಮಹದೇವಪುರ ಪೊಲೀಸರು ವಶಕ್ಕೆ ಪಡೆದಿದ್ದು, ಈತನಿಂದ ₹1.50 ಲಕ್ಷ ಮೌಲ್ಯದ 12 ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

7 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

8 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

9 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

9 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

12 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

20 hours ago