ಎಸ್ಜೆ ಪಾರ್ಕ್ ಪೊಲೀಸ್ರು ರಾಜ್ಯದ ವಿವಿಧೆಡೆ ನಡೆದ ಅಕ್ರಮ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಯಶಸ್ವಿಯಾಗಿ ಬಂಧಿಸಿದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.
ಬಂಧಿತರಿಂದ 25ಗ್ರಾಂ ಬಂಗಾರದ ಆಭರಣಗಳು, 124ಗ್ರಾಂ ಬೆಳ್ಳಿಯ ವಸ್ತುಗಳು, ₹6000 ನಗದು, 3 ಕಾರುಗಳು ಮತ್ತು 6 ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮಾ ಮೌಲ್ಯ ₹34.27 ಲಕ್ಷ. ಈ ಬಂಧನೆಯೊಂದಿಗೆ ಬೆಂಗಳೂರು, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 11 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ನಿಮ್ಮ ವಾಹನಗಳು ಮತ್ತು ಅಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳಿ. ಯಾವುದೇ ಶಂಕಾಸ್ಪದ ಚಟುವಟಿಕೆಯನ್ನು ನೋಡಿದರೆ ತಕ್ಷಣವೇ #Namma112 ಗೆ ಮಾಹಿತಿ ನೀಡಿ ಎಂದರು.
ಅದೇ ರೀತಿ, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯವರು ₹2.46 ಕೋಟಿ ನಗದು ಮತ್ತು ರೆಂಟಲ್ ಆ್ಯಪ್ ಮೂಲಕ ಬುಕ್ ಮಾಡಿದ ಇನೋವಾ ಕಾರು ಕದ್ದಿದ್ದ ಇಬ್ಬರನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ₹2,20,48,000 ನಗದು, ₹15 ಲಕ್ಷ ಮೌಲ್ಯದ ಇನೋವಾ ಕಾರು ಮತ್ತು ಕೃತ್ಯದಲ್ಲಿ ಬಳಸಿದ ಸ್ವಿಫ್ಟ್ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ—ಒಟ್ಟು ₹2.35 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…