ವಿವಿಧ ಪ್ರಕರಣಗಳ ಆರೋಪಿಗಳ ಬಂಧನ: ಅಪಾರ ಮೌಲ್ಯದ ಮಾಲು ವಶ

ಎಸ್‌ಜೆ ಪಾರ್ಕ್ ಪೊಲೀಸ್‌ರು ರಾಜ್ಯದ ವಿವಿಧೆಡೆ ನಡೆದ ಅಕ್ರಮ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಯಶಸ್ವಿಯಾಗಿ ಬಂಧಿಸಿದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.

ಬಂಧಿತರಿಂದ 25ಗ್ರಾಂ ಬಂಗಾರದ ಆಭರಣಗಳು, 124ಗ್ರಾಂ ಬೆಳ್ಳಿಯ ವಸ್ತುಗಳು, ₹6000 ನಗದು, 3 ಕಾರುಗಳು ಮತ್ತು 6 ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮಾ ಮೌಲ್ಯ ₹34.27 ಲಕ್ಷ. ಈ ಬಂಧನೆಯೊಂದಿಗೆ ಬೆಂಗಳೂರು, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 11 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ನಿಮ್ಮ ವಾಹನಗಳು ಮತ್ತು ಅಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳಿ. ಯಾವುದೇ ಶಂಕಾಸ್ಪದ ಚಟುವಟಿಕೆಯನ್ನು ನೋಡಿದರೆ ತಕ್ಷಣವೇ #Namma112 ಗೆ ಮಾಹಿತಿ ನೀಡಿ ಎಂದರು.

ತಲಘಟ್ಟಪುರ ಪೊಲೀಸರು ಜೆಎಚ್‌ಬಿಸಿಎಸ್ ಲೇಔಟ್‌ನಲ್ಲಿ ಹಗಲು ಮನೆ ಕಳ್ಳತನದಲ್ಲಿ ಭಾಗಿಯಾದ ಐವರು ವಿದೇಶಿ ನಾಗರಿಕರನ್ನು ಬಂಧಿಸಿದ್ದಾರೆ. ಬಂಧಿತರಿಂದ ₹50 ಲಕ್ಷ ಮೌಲ್ಯದ ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 502 ಗ್ರಾಂ ಚಿನ್ನ ಮತ್ತು ವಜ್ರದ ಆಭರಣಗಳು, 4.5 ಕೆಜಿ ಬೆಳ್ಳಿಯ ವಸ್ತುಗಳು ಹಾಗೂ ಎರಡು ಮೊಬೈಲ್ ಫೋನ್‌ಗಳು ಸೇರಿವೆ. ಆರೋಪಿಗಳನ್ನು ಘಟನೆಯ 48 ಗಂಟೆಗಳ ಒಳಗೆ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಗುಂಟೆ ಪಾಳ್ಯ ಪೊಲೀಸರು ಮನೆಕಳ್ಳತನ ಪ್ರಕರಣದಲ್ಲಿ, ಮನೆ ಕೆಲಸದಾತನನ್ನು ಬಂಧಿಸಿದ್ದು, ಬಂಧಿತನಿಂದ ಮನೆಯಲ್ಲಿ ಕದ್ದಿದ್ದ ಒಟ್ಟು ಸುಮಾರು ₹10 ಲಕ್ಷ ಮೌಲ್ಯದ 128 ಗ್ರಾಂ ಚಿನ್ನ ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮನೆಕೆಲಸದವರನ್ನು ನೇಮಿಸಿಕೊಳ್ಳುವ ಮೊದಲು ಅವರ ಸರಿಯಾದ ಹಿನ್ನೆಲೆಯನ್ನು ಪರಿಶೀಲನೆ ಮಾಡಿ ಎಂದು ನಗರದ ನಾಗರಿಕರಿಗೆ ಸಲಹೆ ನೀಡಲಾಗಿದೆ ಎಂದು ಹೇಳಿದರು.

ಸುಬ್ರಮಣ್ಯಪುರ ಠಾಣೆ ಪೊಲೀಸರು ಚಿನ್ನದ ಆಭರಣಗಳನ್ನು ಕದ್ದೊಯ್ದ ಪ್ರಮುಖ ಆರೋಪಿ ಮತ್ತು ಅವನ ಸಹಚರರನ್ನು ಬಂಧಿಸಿದ್ದು, 202.9 ಗ್ರಾಂ ತೂಕದ ₹16 ಲಕ್ಷ ಮೌಲ್ಯದ ಕಳವು ಮಾಡಿದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನುಳಿದ ಪರಾರಿಯಾಗಿರುವ ಆರೋಪಿಗಳನ್ನು ಪತ್ತೆಕಾರ್ಯ ಮುಂದುವರೆದಿದೆ ಎಂದರು.

ಅದೇ ರೀತಿ, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯವರು ₹2.46 ಕೋಟಿ ನಗದು ಮತ್ತು ರೆಂಟಲ್ ಆ್ಯಪ್ ಮೂಲಕ ಬುಕ್ ಮಾಡಿದ ಇನೋವಾ ಕಾರು ಕದ್ದಿದ್ದ ಇಬ್ಬರನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ₹2,20,48,000 ನಗದು, ₹15 ಲಕ್ಷ ಮೌಲ್ಯದ ಇನೋವಾ ಕಾರು ಮತ್ತು ಕೃತ್ಯದಲ್ಲಿ ಬಳಸಿದ ಸ್ವಿಫ್ಟ್ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ—ಒಟ್ಟು ₹2.35 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

33 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

2 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

10 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago