ಜಯನಗರ ಪೊಲೀಸ್ ಠಾಣೆ ಪೊಲೀಸರು ಮನೆ ಕಳ್ಳತನ ಮತ್ತು ವಾಹನ ಕಳವು ಪ್ರಕರಣಗಳಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರಿಂದ ಒಟ್ಟು 390 ಗ್ರಾಂ ಚಿನ್ನದ ಬುಲಿಯನ್ ಮತ್ತು 2 ಕಳವಾದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹32 ಲಕ್ಷ ವಾಗಿದೆ. ಸದರಿ ಬಂಧನದಿಂದ ಬೆಂಗಳೂರು ನಗರದಾದ್ಯಂತ ದಾಖಲಾಗಿದ್ದ 4 ಪ್ರಕರಣಗಳ ಪತ್ತೆಗೆ ಕಾರಣವಾಗಿದೆ. ನಾಗರಿಕರು ವಾಹನಗಳನ್ನು ಸುರಕ್ಷಿತ ಪ್ರದೇಶಗಳಲ್ಲಿ ನಿಲ್ಲಿಸಲು, ಹೆಚ್ಚುವರಿ ಲಾಕಿಂಗ್ ವ್ಯವಸ್ಥೆಗಳನ್ನು ಬಳಸಲು ಮತ್ತು ಸಾಧ್ಯವಾದಲ್ಲಿ GPS ಆಧಾರಿತ ಟ್ರ್ಯಾಕರ್ಗಳನ್ನು ಅಳವಡಿಸಲು ಸಲಹೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಹೇಳಿದರು.
ಎಂಸಿಸಿಟಿಎನ್ಎಸ್ (ಮೊಬೈಲ್ ಕಂಪಾನಿಯನ್ ಫಾರ್ ಕ್ರೈಮ್ ಅಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ & ಸಿಸ್ಟಮ್ಸ್) ಮೂಲಕ ನಿಗಾ ಮೂಲಸೌಕರ್ಯದ ತ್ವರಿತಗತಿಯ ವಿಸ್ತರಣೆಯನ್ನು ಒತ್ತಿ ಹೇಳಿದರು. ಏಪ್ರಿಲ್ 30, 2025 ರ ವೇಳೆಗೆ, ಒಟ್ಟು 5,35,815 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ನಗರದಾದ್ಯಂತ ಜಿಯೊ-ಟ್ಯಾಗ್ ಮಾಡಲಾಗಿದೆ – ಜನವರಿ 1, 2024 ರಿಂದ 3,03,104 ಕ್ಯಾಮೆರಾಗಳ ಹೆಚ್ಚಳವಾಗಿದೆ. ಎಲ್ಲಾ 8 ವಿಭಾಗಗಳಲ್ಲಿ ಈ ಗಮನಾರ್ಹ ವೃದ್ಧಿಯು ಅಪರಾಧ ತಡೆಗಟ್ಟುವಿಕೆ, ಪತ್ತೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಬಲಪಡಿಸುತ್ತದೆ ಎಂದರು.
ಬೆಂಗಳೂರು ನಗರ ಪೊಲೀಸರ CSB-SIS ತಂಡವು ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಟಾಟಾ ಐಪಿಎಲ್ ಟಿ20 ಪಂದ್ಯದ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂರು ಜನಗಳನ್ನು ವ್ಯಕ್ತಿಗಳನ್ನು ಬಂಧಿಸಿದೆ. ಒಟ್ಟು 13 ಟಿಕೆಟ್ಗಳು, 3 ಮೊಬೈಲ್ ಫೋನ್ಗಳು, ₹1,000 ನಗದು ಮತ್ತು ಸಂಬಂಧಿತ ಬ್ಯಾಂಕ್ ಖಾತೆಯಿಂದ ₹36,190 ಅನ್ನು ವಶಪಡಿಸಿಕೊಳ್ಳಲಾಗಿದೆ. ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ಗಳನ್ನು ಖರೀದಿಸುವುದು ಅಥವಾ ಮಾರಾಟ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…