ಜಯನಗರ ಪೊಲೀಸ್ ಠಾಣೆ ಪೊಲೀಸರು ಮನೆ ಕಳ್ಳತನ ಮತ್ತು ವಾಹನ ಕಳವು ಪ್ರಕರಣಗಳಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರಿಂದ ಒಟ್ಟು 390 ಗ್ರಾಂ ಚಿನ್ನದ ಬುಲಿಯನ್ ಮತ್ತು 2 ಕಳವಾದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹32 ಲಕ್ಷ ವಾಗಿದೆ. ಸದರಿ ಬಂಧನದಿಂದ ಬೆಂಗಳೂರು ನಗರದಾದ್ಯಂತ ದಾಖಲಾಗಿದ್ದ 4 ಪ್ರಕರಣಗಳ ಪತ್ತೆಗೆ ಕಾರಣವಾಗಿದೆ. ನಾಗರಿಕರು ವಾಹನಗಳನ್ನು ಸುರಕ್ಷಿತ ಪ್ರದೇಶಗಳಲ್ಲಿ ನಿಲ್ಲಿಸಲು, ಹೆಚ್ಚುವರಿ ಲಾಕಿಂಗ್ ವ್ಯವಸ್ಥೆಗಳನ್ನು ಬಳಸಲು ಮತ್ತು ಸಾಧ್ಯವಾದಲ್ಲಿ GPS ಆಧಾರಿತ ಟ್ರ್ಯಾಕರ್ಗಳನ್ನು ಅಳವಡಿಸಲು ಸಲಹೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಹೇಳಿದರು.
ಎಂಸಿಸಿಟಿಎನ್ಎಸ್ (ಮೊಬೈಲ್ ಕಂಪಾನಿಯನ್ ಫಾರ್ ಕ್ರೈಮ್ ಅಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವರ್ಕ್ & ಸಿಸ್ಟಮ್ಸ್) ಮೂಲಕ ನಿಗಾ ಮೂಲಸೌಕರ್ಯದ ತ್ವರಿತಗತಿಯ ವಿಸ್ತರಣೆಯನ್ನು ಒತ್ತಿ ಹೇಳಿದರು. ಏಪ್ರಿಲ್ 30, 2025 ರ ವೇಳೆಗೆ, ಒಟ್ಟು 5,35,815 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ನಗರದಾದ್ಯಂತ ಜಿಯೊ-ಟ್ಯಾಗ್ ಮಾಡಲಾಗಿದೆ – ಜನವರಿ 1, 2024 ರಿಂದ 3,03,104 ಕ್ಯಾಮೆರಾಗಳ ಹೆಚ್ಚಳವಾಗಿದೆ. ಎಲ್ಲಾ 8 ವಿಭಾಗಗಳಲ್ಲಿ ಈ ಗಮನಾರ್ಹ ವೃದ್ಧಿಯು ಅಪರಾಧ ತಡೆಗಟ್ಟುವಿಕೆ, ಪತ್ತೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಬಲಪಡಿಸುತ್ತದೆ ಎಂದರು.
ಬೆಂಗಳೂರು ನಗರ ಪೊಲೀಸರ CSB-SIS ತಂಡವು ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಟಾಟಾ ಐಪಿಎಲ್ ಟಿ20 ಪಂದ್ಯದ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂರು ಜನಗಳನ್ನು ವ್ಯಕ್ತಿಗಳನ್ನು ಬಂಧಿಸಿದೆ. ಒಟ್ಟು 13 ಟಿಕೆಟ್ಗಳು, 3 ಮೊಬೈಲ್ ಫೋನ್ಗಳು, ₹1,000 ನಗದು ಮತ್ತು ಸಂಬಂಧಿತ ಬ್ಯಾಂಕ್ ಖಾತೆಯಿಂದ ₹36,190 ಅನ್ನು ವಶಪಡಿಸಿಕೊಳ್ಳಲಾಗಿದೆ. ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್ಗಳನ್ನು ಖರೀದಿಸುವುದು ಅಥವಾ ಮಾರಾಟ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…