ವಿವಿಧ ಪ್ರಕರಣ ಭೇದಿಸಿದ ಪೊಲೀಸರು: ಬಂಧಿತರಿಂದ ಅಪಾರ ಪ್ರಮಾಣದ ಮಾಲು ವಶ

ಜಯನಗರ ಪೊಲೀಸ್ ಠಾಣೆ ಪೊಲೀಸರು ಮನೆ ಕಳ್ಳತನ ಮತ್ತು ವಾಹನ ಕಳವು ಪ್ರಕರಣಗಳಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರಿಂದ ಒಟ್ಟು 390 ಗ್ರಾಂ ಚಿನ್ನದ ಬುಲಿಯನ್ ಮತ್ತು 2 ಕಳವಾದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹32 ಲಕ್ಷ ವಾಗಿದೆ. ಸದರಿ ಬಂಧನದಿಂದ ಬೆಂಗಳೂರು ನಗರದಾದ್ಯಂತ ದಾಖಲಾಗಿದ್ದ 4 ಪ್ರಕರಣಗಳ ಪತ್ತೆಗೆ ಕಾರಣವಾಗಿದೆ. ನಾಗರಿಕರು ವಾಹನಗಳನ್ನು ಸುರಕ್ಷಿತ  ಪ್ರದೇಶಗಳಲ್ಲಿ ನಿಲ್ಲಿಸಲು, ಹೆಚ್ಚುವರಿ ಲಾಕಿಂಗ್ ವ್ಯವಸ್ಥೆಗಳನ್ನು ಬಳಸಲು ಮತ್ತು ಸಾಧ್ಯವಾದಲ್ಲಿ GPS ಆಧಾರಿತ ಟ್ರ್ಯಾಕರ್‌ಗಳನ್ನು ಅಳವಡಿಸಲು ಸಲಹೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ಹೇಳಿದರು.

ಅದೇ ರೀತಿ, ಗಿರಿನಗರ ಪೊಲೀಸ್ ಠಾಣೆಯ ಪೊಲೀಸರು ಸಂಬಂಧಿಕರ ನಿವಾಸದಲ್ಲಿ ಮನೆ ಕಳ್ಳತನ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದು, ಬಂಧಿತನಿಂದ ₹24.51 ಲಕ್ಷ ಮೌಲ್ಯದ 258 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ನಿವಾಸಿಗಳಿಗೆ ಮನೆ ಭದ್ರತೆಯನ್ನು ಹೆಚ್ಚಿಸಲು, ಪ್ರಯಾಣದ ಯೋಜನೆಗಳನ್ನು ಬಹಿರಂಗಪಡಿಸುವುದನ್ನು ತಪ್ಪಿಸಲು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ಅಥವಾ 112 ಕ್ಕೆ ಕರೆ ಮಾಡಲು ಕೋರಲಾಗಿದೆ ಎಂದು ಹೇಳಿದರು.

ಮಾದಕ ದ್ರವ್ಯ ಕಳ್ಳಸಾಗಣೆಯ ವಿರುದ್ಧ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ, ಬೆಂಗಳೂರು ನಗರ ಪೊಲೀಸರು (ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ, ಗೋವಿಂದರಾಜನಗರ ಪೊಲೀಸ್ ಠಾಣೆ, ಮತ್ತು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ) — ಗಾಂಜಾ ಅಕ್ರಮ ಮಾರಾಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 109 ಕೆಜಿ ಗಾಂಜಾ, ಮೂರು ಮೊಬೈಲ್ ಫೋನ್‌ಗಳು, ಒಂದು ಸರಕು ವಾಹನ, ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ, ಇದರ ಒಟ್ಟು ಮೌಲ್ಯ ₹89.20 ಲಕ್ಷಗಳಾಗಿವೆ ಎಂದು ತಿಳಿಸಿದರು..

ಎಂಸಿಸಿಟಿಎನ್‌ಎಸ್ (ಮೊಬೈಲ್ ಕಂಪಾನಿಯನ್ ಫಾರ್ ಕ್ರೈಮ್ ಅಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ & ಸಿಸ್ಟಮ್ಸ್) ಮೂಲಕ ನಿಗಾ ಮೂಲಸೌಕರ್ಯದ ತ್ವರಿತಗತಿಯ ವಿಸ್ತರಣೆಯನ್ನು ಒತ್ತಿ ಹೇಳಿದರು. ಏಪ್ರಿಲ್ 30, 2025 ರ ವೇಳೆಗೆ, ಒಟ್ಟು 5,35,815 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ನಗರದಾದ್ಯಂತ ಜಿಯೊ-ಟ್ಯಾಗ್ ಮಾಡಲಾಗಿದೆ – ಜನವರಿ 1, 2024 ರಿಂದ 3,03,104 ಕ್ಯಾಮೆರಾಗಳ ಹೆಚ್ಚಳವಾಗಿದೆ. ಎಲ್ಲಾ 8 ವಿಭಾಗಗಳಲ್ಲಿ ಈ ಗಮನಾರ್ಹ ವೃದ್ಧಿಯು ಅಪರಾಧ ತಡೆಗಟ್ಟುವಿಕೆ, ಪತ್ತೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಬಲಪಡಿಸುತ್ತದೆ ಎಂದರು.

ಬೆಂಗಳೂರು ನಗರ ಪೊಲೀಸರ CSB-SIS ತಂಡವು ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಟಾಟಾ ಐಪಿಎಲ್ ಟಿ20 ಪಂದ್ಯದ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂರು ಜನಗಳನ್ನು ವ್ಯಕ್ತಿಗಳನ್ನು ಬಂಧಿಸಿದೆ. ಒಟ್ಟು 13 ಟಿಕೆಟ್‌ಗಳು, 3 ಮೊಬೈಲ್ ಫೋನ್‌ಗಳು, ₹1,000 ನಗದು ಮತ್ತು ಸಂಬಂಧಿತ ಬ್ಯಾಂಕ್ ಖಾತೆಯಿಂದ ₹36,190 ಅನ್ನು ವಶಪಡಿಸಿಕೊಳ್ಳಲಾಗಿದೆ. ಕಾಳಸಂತೆಯಲ್ಲಿ ಐಪಿಎಲ್ ಟಿಕೆಟ್‌ಗಳನ್ನು ಖರೀದಿಸುವುದು ಅಥವಾ ಮಾರಾಟ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದರು.

ಕೊತ್ತನೂರು ಪೊಲೀಸರು ಎಂಡಿಎಂಎ  ಅಕ್ರಮ ಸ್ವಾಧೀನ ಮತ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು 416 ಗ್ರಾಂ ಎಂಡಿಎಂಎ, ₹15,000 ನಗದು, ಹೊಂಡಾ ಸಿವಿಕ್ ಕಾರು, ದ್ವಿಚಕ್ರ ವಾಹನ, ಎರಡು ಮೊಬೈಲ್ ಫೋನ್‌ಗಳು ಮತ್ತು ಮಾದಕ ವ್ಯಾಪಾರದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದು ಇದರ ಒಟ್ಟು ಮೌಲ್ಯ ₹52.15 ಲಕ್ಷಗಳಾಗಿವೆ. ಯಾವುದೇ ಮಾದಕ ವ್ಯಸನ ಸಂಬಂಧಿತ ಚಟುವಟಿಕೆಗಳನ್ನು 1908 ಕ್ಕೆ ವರದಿ ಮಾಡಿ ಎಂದು ತಿಳಿಸಿದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

5 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

15 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

16 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

21 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

23 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago