ವಾಹನ ಕಳ್ಳತನದ ವಿರುದ್ಧ ನಡೆದ ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಬೆಂಗಳೂರು ನಗರ ಪೊಲೀಸರು (ಕಾಡುಗೊಂಡನಹಳ್ಳಿ, ಬಾಣಸವಾಡಿ ಮತ್ತು ಬಸವನಗುಡಿ ಪೊಲೀಸ್ ಠಾಣೆಗಳು) — ವಾಹನ ಕಳ್ಳತನ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಒಟ್ಟು 3 ಕಾರುಗಳು, 13 ದ್ವಿಚಕ್ರ ವಾಹನಗಳು ಮತ್ತು 1 ಐಫೋನ್ನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ₹20.14 ಲಕ್ಷಗಳಾಗಿವೆ. ಇದರಿಂದ 11 ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ನಾಗರಿಕರು ಸೂಕ್ತ ಲಾಕಿಂಗ್ ವ್ಯವಸ್ಥೆಯನ್ನು ಬಳಸಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ಸಲಹೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.
ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ಮನೆಗಳ್ಳತನ, ಮೊಬೈಲ್ ಕಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನಗಳಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 179 ಗ್ರಾಂ ಚಿನ್ನಾಭರಣಗಳು, 570 ಗ್ರಾಂ ಬೆಳ್ಳಿ ವಸ್ತುಗಳು, 5 ಮೊಬೈಲ್ ಫೋನ್ಗಳು ಮತ್ತು 4 ಕದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ – ಇವುಗಳ ಒಟ್ಟು ಮೌಲ್ಯ ₹20 ಲಕ್ಷಗಳಾಗಿವೆ. ಇದರಿಂದಾಗಿ ಸಿದ್ದಾಪುರ, ಆಡುಗೋಡಿ, ಕಬ್ಬನ್ ಪಾರ್ಕ್ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ 9 ಪ್ರಕರಣಗಳು ಪತ್ತೆಯಾಗಿವೆ. ಸಾರ್ವಜನಿಕರು ಮನೆಯಲ್ಲಿನ ಅಮೂಲ್ಯವಾದ ವಸ್ತುಗಳ ಬಗ್ಗೆ ಮತ್ತು ವಾಹನಗಳ ಬಗ್ಗೆ ಎಚ್ಚರದಿಂದಿದ್ದು, ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿದೆ, ವಿಶೇಷವಾಗಿ ಬೆಳಗಿನ ಸಮಯ ಹಾಗೂ ವಸತಿ ಪ್ರದೇಶಗಳಲ್ಲಿ ಅನುಮಾನಾಸ್ಪದ ನಡವಳಿಕೆ ಕಂಡುಬಂದಲ್ಲಿ ತಕ್ಷಣವೇ ವರದಿ ಮಾಡಲು ಸೂಚಿಸಲಾಗಿದೆ ಎಂದರು.
ಬೆಂಗಳೂರು ನಗರ ಪೊಲೀಸರ ಸಿಸಿಬಿ- (ವಿಶೇಷ ತನಿಖಾ ತಂಡ), 2025 ಏಪ್ರಿಲ್ 2 ರಿಂದ ಏಪ್ರಿಲ್ 18 ರವರೆಗಿನ ಕಾರ್ಯಾಚರಣೆಯಲ್ಲಿ, ಟಾಟಾ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಮತ್ತು ಬ್ಲ್ಯಾಕ್ ಮಾರ್ಕೆಟ್ ಟಿಕೆಟ್ ಮಾರಾಟವನ್ನು ಭೇದಿಸಿ, 09 ಪೊಲೀಸ್ ಠಾಣೆಗಳಲ್ಲಿ ಅನೇಕ ಶಂಕಿತರನ್ನು ಬಂಧಿಸಿ ಬಂಧಿತರಿಂದ ನಗದು, ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ಗಳು, ಟ ಬೆಟ್ಟಿಂಗ್ ನಿಂದ ಬಂದ ಹಣ ಹಾಗೂ ₹2 ಕೋಟಿಗೂ ಹೆಚ್ಚು ಮೌಲ್ಯದ ಚಿಪ್ಗಳು ಮತ್ತು 50 ಕ್ಕೂ ಹೆಚ್ಚು ಅಕ್ರಮ ಐಪಿಎಲ್ ಟಿಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ನಾಗರಿಕರು ಅಕ್ರಮ ಬೆಟ್ಟಿಂಗ್ ಅಥವಾ ಟಿಕೆಟ್ ಮರುಮಾರಾಟದಲ್ಲಿ ತೊಡಗಿಸಿಕೊಳ್ಳಬಾರದು ಅಥವಾ ಬೆಂಬಲಿಸಬಾರದು ಎಂದು ಸೂಚಿಸಲಾಗಿದೆ. ಅಂತಹ ಚಟುವಟಿಕೆಗಳು ಕಂಡುಬಂದರೆ #ನಮ್ಮ112 ಗೆ ವರದಿ ಮಾಡಿ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…