ವಾಹನ ಕಳ್ಳತನದ ವಿರುದ್ಧ ನಡೆದ ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಬೆಂಗಳೂರು ನಗರ ಪೊಲೀಸರು (ಕಾಡುಗೊಂಡನಹಳ್ಳಿ, ಬಾಣಸವಾಡಿ ಮತ್ತು ಬಸವನಗುಡಿ ಪೊಲೀಸ್ ಠಾಣೆಗಳು) — ವಾಹನ ಕಳ್ಳತನ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಒಟ್ಟು 3 ಕಾರುಗಳು, 13 ದ್ವಿಚಕ್ರ ವಾಹನಗಳು ಮತ್ತು 1 ಐಫೋನ್ನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ₹20.14 ಲಕ್ಷಗಳಾಗಿವೆ. ಇದರಿಂದ 11 ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ನಾಗರಿಕರು ಸೂಕ್ತ ಲಾಕಿಂಗ್ ವ್ಯವಸ್ಥೆಯನ್ನು ಬಳಸಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ಸಲಹೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.
ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ಮನೆಗಳ್ಳತನ, ಮೊಬೈಲ್ ಕಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನಗಳಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 179 ಗ್ರಾಂ ಚಿನ್ನಾಭರಣಗಳು, 570 ಗ್ರಾಂ ಬೆಳ್ಳಿ ವಸ್ತುಗಳು, 5 ಮೊಬೈಲ್ ಫೋನ್ಗಳು ಮತ್ತು 4 ಕದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ – ಇವುಗಳ ಒಟ್ಟು ಮೌಲ್ಯ ₹20 ಲಕ್ಷಗಳಾಗಿವೆ. ಇದರಿಂದಾಗಿ ಸಿದ್ದಾಪುರ, ಆಡುಗೋಡಿ, ಕಬ್ಬನ್ ಪಾರ್ಕ್ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ 9 ಪ್ರಕರಣಗಳು ಪತ್ತೆಯಾಗಿವೆ. ಸಾರ್ವಜನಿಕರು ಮನೆಯಲ್ಲಿನ ಅಮೂಲ್ಯವಾದ ವಸ್ತುಗಳ ಬಗ್ಗೆ ಮತ್ತು ವಾಹನಗಳ ಬಗ್ಗೆ ಎಚ್ಚರದಿಂದಿದ್ದು, ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿದೆ, ವಿಶೇಷವಾಗಿ ಬೆಳಗಿನ ಸಮಯ ಹಾಗೂ ವಸತಿ ಪ್ರದೇಶಗಳಲ್ಲಿ ಅನುಮಾನಾಸ್ಪದ ನಡವಳಿಕೆ ಕಂಡುಬಂದಲ್ಲಿ ತಕ್ಷಣವೇ ವರದಿ ಮಾಡಲು ಸೂಚಿಸಲಾಗಿದೆ ಎಂದರು.
ಬೆಂಗಳೂರು ನಗರ ಪೊಲೀಸರ ಸಿಸಿಬಿ- (ವಿಶೇಷ ತನಿಖಾ ತಂಡ), 2025 ಏಪ್ರಿಲ್ 2 ರಿಂದ ಏಪ್ರಿಲ್ 18 ರವರೆಗಿನ ಕಾರ್ಯಾಚರಣೆಯಲ್ಲಿ, ಟಾಟಾ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಮತ್ತು ಬ್ಲ್ಯಾಕ್ ಮಾರ್ಕೆಟ್ ಟಿಕೆಟ್ ಮಾರಾಟವನ್ನು ಭೇದಿಸಿ, 09 ಪೊಲೀಸ್ ಠಾಣೆಗಳಲ್ಲಿ ಅನೇಕ ಶಂಕಿತರನ್ನು ಬಂಧಿಸಿ ಬಂಧಿತರಿಂದ ನಗದು, ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ಗಳು, ಟ ಬೆಟ್ಟಿಂಗ್ ನಿಂದ ಬಂದ ಹಣ ಹಾಗೂ ₹2 ಕೋಟಿಗೂ ಹೆಚ್ಚು ಮೌಲ್ಯದ ಚಿಪ್ಗಳು ಮತ್ತು 50 ಕ್ಕೂ ಹೆಚ್ಚು ಅಕ್ರಮ ಐಪಿಎಲ್ ಟಿಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ನಾಗರಿಕರು ಅಕ್ರಮ ಬೆಟ್ಟಿಂಗ್ ಅಥವಾ ಟಿಕೆಟ್ ಮರುಮಾರಾಟದಲ್ಲಿ ತೊಡಗಿಸಿಕೊಳ್ಳಬಾರದು ಅಥವಾ ಬೆಂಬಲಿಸಬಾರದು ಎಂದು ಸೂಚಿಸಲಾಗಿದೆ. ಅಂತಹ ಚಟುವಟಿಕೆಗಳು ಕಂಡುಬಂದರೆ #ನಮ್ಮ112 ಗೆ ವರದಿ ಮಾಡಿ ಎಂದು ತಿಳಿಸಿದರು.
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…