ವಿವಿಧ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿಗಳಿಂದ ಅಪಾರ ಮೌಲ್ಯದ ಮಾಲು ವಶ

ವಾಹನ ಕಳ್ಳತನದ ವಿರುದ್ಧ ನಡೆದ ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಬೆಂಗಳೂರು ನಗರ ಪೊಲೀಸರು (ಕಾಡುಗೊಂಡನಹಳ್ಳಿ, ಬಾಣಸವಾಡಿ ಮತ್ತು ಬಸವನಗುಡಿ ಪೊಲೀಸ್ ಠಾಣೆಗಳು) — ವಾಹನ ಕಳ್ಳತನ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಒಟ್ಟು 3 ಕಾರುಗಳು, 13 ದ್ವಿಚಕ್ರ ವಾಹನಗಳು ಮತ್ತು 1 ಐಫೋನ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ₹20.14 ಲಕ್ಷಗಳಾಗಿವೆ. ಇದರಿಂದ 11 ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ನಾಗರಿಕರು ಸೂಕ್ತ ಲಾಕಿಂಗ್ ವ್ಯವಸ್ಥೆಯನ್ನು ಬಳಸಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ಸಲಹೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.

ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ಮನೆಗಳ್ಳತನ, ಮೊಬೈಲ್ ಕಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನಗಳಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 179 ಗ್ರಾಂ ಚಿನ್ನಾಭರಣಗಳು, 570 ಗ್ರಾಂ ಬೆಳ್ಳಿ ವಸ್ತುಗಳು, 5 ಮೊಬೈಲ್ ಫೋನ್‌ಗಳು ಮತ್ತು 4 ಕದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ – ಇವುಗಳ ಒಟ್ಟು ಮೌಲ್ಯ ₹20 ಲಕ್ಷಗಳಾಗಿವೆ. ಇದರಿಂದಾಗಿ ಸಿದ್ದಾಪುರ, ಆಡುಗೋಡಿ, ಕಬ್ಬನ್ ಪಾರ್ಕ್ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ 9 ಪ್ರಕರಣಗಳು ಪತ್ತೆಯಾಗಿವೆ. ಸಾರ್ವಜನಿಕರು ಮನೆಯಲ್ಲಿನ ಅಮೂಲ್ಯವಾದ ವಸ್ತುಗಳ ಬಗ್ಗೆ ಮತ್ತು ವಾಹನಗಳ ಬಗ್ಗೆ ಎಚ್ಚರದಿಂದಿದ್ದು, ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿದೆ, ವಿಶೇಷವಾಗಿ ಬೆಳಗಿನ ಸಮಯ ಹಾಗೂ ವಸತಿ ಪ್ರದೇಶಗಳಲ್ಲಿ ಅನುಮಾನಾಸ್ಪದ ನಡವಳಿಕೆ ಕಂಡುಬಂದಲ್ಲಿ ತಕ್ಷಣವೇ ವರದಿ ಮಾಡಲು ಸೂಚಿಸಲಾಗಿದೆ ಎಂದರು.

ಮತ್ತೊಂದು ಪ್ರಕರಣದಲ್ಲಿ  ಮಾರತಹಳ್ಳಿ ಪೊಲೀಸರು ತನ್ನದೇ ಕುಟುಂಬದಿಂದ ಚಿನ್ನದ ಆಭರಣಗಳನ್ನು ಕದ್ದಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತಳಿಂದ ₹21 ಲಕ್ಷ ಮೌಲ್ಯದ 258 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಕದ್ದ ವಸ್ತುಗಳಲ್ಲಿ 30 ಗ್ರಾಂ ಚಿನ್ನವನ್ನು ಆಭರಣದ ಅಂಗಡಿಯಲ್ಲಿ ಅಡವಿಟ್ಟಿದ್ದು ಮತ್ತು 228 ಗ್ರಾಂ ಚಿನ್ನವನ್ನು ಆಕೆಯ ಮನೆಯಲ್ಲಿ ಅಡಗಿಸಿಟ್ಟಿದ್ದು ವಶಪಡಿಸಿಕೊಳ್ಳಲಾಗಿದೆ. ನಾಗರಿಕರು ಮೌಲ್ಯಯುತ ವಸ್ತುಗಳನ್ನು ಸುರಕ್ಷಿತವಾಗಿಡಲು, ವಿಶ್ವಾಸಾರ್ಹ ವ್ಯಕ್ತಿಗಳಿಗೆ ಮಾತ್ರ ಪ್ರವೇಶವನ್ನು ನೀಡಲು ಮತ್ತು ಕಳ್ಳತನದ ಘಟನೆಗಳನ್ನು ತಕ್ಷಣವೇ ವರದಿ ಮಾಡಿ ಕಾಲಕಾಲಕ್ಕೆ ಕ್ರಮ ಕೈಗೊಳ್ಳಲು ಸಲಹೆ ನೀಡಲಾಗಿದೆ ಎಂದು ಹೇಳಿದರು.

ಬೆಂಗಳೂರು ನಗರ ಪೊಲೀಸರ ಸಿಸಿಬಿ- (ವಿಶೇಷ ತನಿಖಾ ತಂಡ), 2025 ಏಪ್ರಿಲ್ 2 ರಿಂದ  ಏಪ್ರಿಲ್ 18 ರವರೆಗಿನ ಕಾರ್ಯಾಚರಣೆಯಲ್ಲಿ, ಟಾಟಾ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಮತ್ತು ಬ್ಲ್ಯಾಕ್ ಮಾರ್ಕೆಟ್ ಟಿಕೆಟ್ ಮಾರಾಟವನ್ನು ಭೇದಿಸಿ, 09 ಪೊಲೀಸ್ ಠಾಣೆಗಳಲ್ಲಿ ಅನೇಕ ಶಂಕಿತರನ್ನು ಬಂಧಿಸಿ ಬಂಧಿತರಿಂದ ನಗದು, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟ ಬೆಟ್ಟಿಂಗ್ ನಿಂದ ಬಂದ ಹಣ ಹಾಗೂ ₹2 ಕೋಟಿಗೂ ಹೆಚ್ಚು ಮೌಲ್ಯದ ಚಿಪ್‌ಗಳು ಮತ್ತು 50 ಕ್ಕೂ ಹೆಚ್ಚು ಅಕ್ರಮ ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಾಗರಿಕರು ಅಕ್ರಮ ಬೆಟ್ಟಿಂಗ್ ಅಥವಾ ಟಿಕೆಟ್ ಮರುಮಾರಾಟದಲ್ಲಿ ತೊಡಗಿಸಿಕೊಳ್ಳಬಾರದು ಅಥವಾ ಬೆಂಬಲಿಸಬಾರದು ಎಂದು ಸೂಚಿಸಲಾಗಿದೆ. ಅಂತಹ ಚಟುವಟಿಕೆಗಳು ಕಂಡುಬಂದರೆ #ನಮ್ಮ112 ಗೆ ವರದಿ ಮಾಡಿ ಎಂದು ತಿಳಿಸಿದರು.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

3 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

8 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

16 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

18 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

21 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

22 hours ago