ವಿವಿಧ ಪ್ರಕರಣ ಭೇದಿಸಿದ ಪೊಲೀಸರು: ಆರೋಪಿಗಳಿಂದ ಅಪಾರ ಮೌಲ್ಯದ ಮಾಲು ವಶ

ವಾಹನ ಕಳ್ಳತನದ ವಿರುದ್ಧ ನಡೆದ ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಬೆಂಗಳೂರು ನಗರ ಪೊಲೀಸರು (ಕಾಡುಗೊಂಡನಹಳ್ಳಿ, ಬಾಣಸವಾಡಿ ಮತ್ತು ಬಸವನಗುಡಿ ಪೊಲೀಸ್ ಠಾಣೆಗಳು) — ವಾಹನ ಕಳ್ಳತನ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಒಟ್ಟು 3 ಕಾರುಗಳು, 13 ದ್ವಿಚಕ್ರ ವಾಹನಗಳು ಮತ್ತು 1 ಐಫೋನ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ₹20.14 ಲಕ್ಷಗಳಾಗಿವೆ. ಇದರಿಂದ 11 ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ನಾಗರಿಕರು ಸೂಕ್ತ ಲಾಕಿಂಗ್ ವ್ಯವಸ್ಥೆಯನ್ನು ಬಳಸಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ಸಲಹೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.

ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ಮನೆಗಳ್ಳತನ, ಮೊಬೈಲ್ ಕಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನಗಳಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 179 ಗ್ರಾಂ ಚಿನ್ನಾಭರಣಗಳು, 570 ಗ್ರಾಂ ಬೆಳ್ಳಿ ವಸ್ತುಗಳು, 5 ಮೊಬೈಲ್ ಫೋನ್‌ಗಳು ಮತ್ತು 4 ಕದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ – ಇವುಗಳ ಒಟ್ಟು ಮೌಲ್ಯ ₹20 ಲಕ್ಷಗಳಾಗಿವೆ. ಇದರಿಂದಾಗಿ ಸಿದ್ದಾಪುರ, ಆಡುಗೋಡಿ, ಕಬ್ಬನ್ ಪಾರ್ಕ್ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ 9 ಪ್ರಕರಣಗಳು ಪತ್ತೆಯಾಗಿವೆ. ಸಾರ್ವಜನಿಕರು ಮನೆಯಲ್ಲಿನ ಅಮೂಲ್ಯವಾದ ವಸ್ತುಗಳ ಬಗ್ಗೆ ಮತ್ತು ವಾಹನಗಳ ಬಗ್ಗೆ ಎಚ್ಚರದಿಂದಿದ್ದು, ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿದೆ, ವಿಶೇಷವಾಗಿ ಬೆಳಗಿನ ಸಮಯ ಹಾಗೂ ವಸತಿ ಪ್ರದೇಶಗಳಲ್ಲಿ ಅನುಮಾನಾಸ್ಪದ ನಡವಳಿಕೆ ಕಂಡುಬಂದಲ್ಲಿ ತಕ್ಷಣವೇ ವರದಿ ಮಾಡಲು ಸೂಚಿಸಲಾಗಿದೆ ಎಂದರು.

ಮತ್ತೊಂದು ಪ್ರಕರಣದಲ್ಲಿ  ಮಾರತಹಳ್ಳಿ ಪೊಲೀಸರು ತನ್ನದೇ ಕುಟುಂಬದಿಂದ ಚಿನ್ನದ ಆಭರಣಗಳನ್ನು ಕದ್ದಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತಳಿಂದ ₹21 ಲಕ್ಷ ಮೌಲ್ಯದ 258 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಕದ್ದ ವಸ್ತುಗಳಲ್ಲಿ 30 ಗ್ರಾಂ ಚಿನ್ನವನ್ನು ಆಭರಣದ ಅಂಗಡಿಯಲ್ಲಿ ಅಡವಿಟ್ಟಿದ್ದು ಮತ್ತು 228 ಗ್ರಾಂ ಚಿನ್ನವನ್ನು ಆಕೆಯ ಮನೆಯಲ್ಲಿ ಅಡಗಿಸಿಟ್ಟಿದ್ದು ವಶಪಡಿಸಿಕೊಳ್ಳಲಾಗಿದೆ. ನಾಗರಿಕರು ಮೌಲ್ಯಯುತ ವಸ್ತುಗಳನ್ನು ಸುರಕ್ಷಿತವಾಗಿಡಲು, ವಿಶ್ವಾಸಾರ್ಹ ವ್ಯಕ್ತಿಗಳಿಗೆ ಮಾತ್ರ ಪ್ರವೇಶವನ್ನು ನೀಡಲು ಮತ್ತು ಕಳ್ಳತನದ ಘಟನೆಗಳನ್ನು ತಕ್ಷಣವೇ ವರದಿ ಮಾಡಿ ಕಾಲಕಾಲಕ್ಕೆ ಕ್ರಮ ಕೈಗೊಳ್ಳಲು ಸಲಹೆ ನೀಡಲಾಗಿದೆ ಎಂದು ಹೇಳಿದರು.

ಬೆಂಗಳೂರು ನಗರ ಪೊಲೀಸರ ಸಿಸಿಬಿ- (ವಿಶೇಷ ತನಿಖಾ ತಂಡ), 2025 ಏಪ್ರಿಲ್ 2 ರಿಂದ  ಏಪ್ರಿಲ್ 18 ರವರೆಗಿನ ಕಾರ್ಯಾಚರಣೆಯಲ್ಲಿ, ಟಾಟಾ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಮತ್ತು ಬ್ಲ್ಯಾಕ್ ಮಾರ್ಕೆಟ್ ಟಿಕೆಟ್ ಮಾರಾಟವನ್ನು ಭೇದಿಸಿ, 09 ಪೊಲೀಸ್ ಠಾಣೆಗಳಲ್ಲಿ ಅನೇಕ ಶಂಕಿತರನ್ನು ಬಂಧಿಸಿ ಬಂಧಿತರಿಂದ ನಗದು, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟ ಬೆಟ್ಟಿಂಗ್ ನಿಂದ ಬಂದ ಹಣ ಹಾಗೂ ₹2 ಕೋಟಿಗೂ ಹೆಚ್ಚು ಮೌಲ್ಯದ ಚಿಪ್‌ಗಳು ಮತ್ತು 50 ಕ್ಕೂ ಹೆಚ್ಚು ಅಕ್ರಮ ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಾಗರಿಕರು ಅಕ್ರಮ ಬೆಟ್ಟಿಂಗ್ ಅಥವಾ ಟಿಕೆಟ್ ಮರುಮಾರಾಟದಲ್ಲಿ ತೊಡಗಿಸಿಕೊಳ್ಳಬಾರದು ಅಥವಾ ಬೆಂಬಲಿಸಬಾರದು ಎಂದು ಸೂಚಿಸಲಾಗಿದೆ. ಅಂತಹ ಚಟುವಟಿಕೆಗಳು ಕಂಡುಬಂದರೆ #ನಮ್ಮ112 ಗೆ ವರದಿ ಮಾಡಿ ಎಂದು ತಿಳಿಸಿದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

2 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

2 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

8 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

16 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago