ವಿವಿಧ‌ ಪ್ರಕರಣ ಭೇದಿಸಿದ ಪೊಲೀಸರು: ಅಪಾರ ಮೌಲ್ಯದ ನಗ, ನಗದು ವಶ

ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಚಿನ್ನಾಭರಣ ಮತ್ತು ನಗದು ಕಳವು ಆರೋಪದಡಿ ಮನೆಕೆಲಸದಾಕೆಯನ್ನು ಬಂಧಿಸಿದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು. ಆರೋಪಿತೆಯಿಂದ ಒಟ್ಟು 48.62 ಗ್ರಾಂ ಚಿನ್ನಾಭರಣ ಮತ್ತು ₹3.86 ಲಕ್ಷ ನಗದು ಸೇರಿದಂತೆ, ಒಟ್ಟು ₹8.47 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.  ನಾಗರಿಕರು, ಮನೆಕೆಲಸಗಾರರನ್ನು ನೇಮಕ ಮಾಡಿಕೊಳ್ಳುವ ಮುನ್ನ ಅವರ ಹಿನ್ನೆಲೆಯನ್ನು ತಪ್ಪದೇ ಪರಿಶೀಲಿಸಬೇಕು. ಹಾಗೂ ಬೆಲೆ ಬಾಳುವ ವಸ್ತುಗಳನ್ನು ಮನೆಯಲ್ಲಿ ಸುರಕ್ಷಿತವಾಗಿ ಇಡುವ ಬಗ್ಗೆ ಎಚ್ಚರಿಕೆ ವಹಿಸುವಂತೆ ನಗರ ಪೊಲೀಸ್ ಕೋರಿದೆ ಎಂದರು.

ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನದ ಆರೋಪದಡಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ 148 ಗ್ರಾಂ ಚಿನ್ನಾಭರಣ ಹಾಗೂ 200 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು ಮೌಲ್ಯ ₹9.20 ಲಕ್ಷ. ನಗರ ಪೊಲೀಸರು, ನಾಗರಿಕರಿಗೆ ತಮ್ಮ ಮನೆಗಳಿಗೆ ಭದ್ರವಾದ ಲಾಕಿಂಗ್ ವ್ಯವಸ್ಥೆ ಅಳವಡಿಸಲು ಹಾಗೂ ಕೀಲಿ-ಅಡಗಿಸುವ ಸ್ಥಳಗಳ ಬಳಕೆ ಮಾಡದಂತೆ ವಿನಂತಿಸಿದ್ದಾರೆ.

ಇದೇ ರೀತಿ, ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವಿದೇಶಿ ಪ್ರಜೆಯೊಬ್ಬನನ್ನು ಅಡ್ಡಗಟ್ಟಿ,  ಮಾರಕಾಸ್ತ್ರ ತೋರಿಸಿ ಆತನ ಬಳಿ ಇದ್ದ ನಗದು ಹಣ, ಪಾಸ್‌ಪೋರ್ಟ್, ಇತರೆ ದಾಖಲೆಗಳಿದ್ದ ಬ್ಯಾಗ್ ಮತ್ತು ಸ್ಕೂಟರ್ ಗಳನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 2 ದ್ವಿಚಕ್ರ ವಾಹನಗಳು, ₹86,000 ನಗದು, ಪಾಸ್‌ಪೋರ್ಟ್ ಮತ್ತು ಇತರೆ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹1.60 ಲಕ್ಷವಾಗಿದೆ. ಪೊಲೀಸರು ನಗರದ ನಾಗರಿಕರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಮೊತ್ತದ ನಗದು ಅಥವಾ ಮಹತ್ವದ ದಾಖಲೆಗಳನ್ನು ಒಯ್ಯುವಾಗ ಹೆಚ್ಚಿನ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ.

ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಮಾಲೀಕರ ಮನೆಯಿಂದ ನಗದು ಕಳವು ಮಾಡಿದ್ದ ಕಾರು ಚಾಲಕನನ್ನು ಬಂಧಿಸಿದ್ದು, ಆರೋಪಿಯಿಂದ ₹1,48,36,500 ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಾಹನ ಚಾಲಕರನ್ನು ನೇಮಕ ಮಾಡುವ ಮೊದಲು, ಅವರ ಹಿನ್ನೆಲೆಯ ಪರಿಶೀಲನೆ, ನಗದನ್ನು ಸುರಕ್ಷಿತವಾಗಿ ಇಡುವಂತ ಕ್ರಮಗಳ ಅಳವಡಿಕೆ ಅತ್ಯಗತ್ಯ ಎಂದು ಎಚ್ಚರಿಸಿದ್ದಾರೆ.

ಹೆಚ್.ಎಸ್.ಆರ್. ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳ ಕಳ್ಳತನದ ಆರೋಪದ ಮೇಲೆ, ಮನೆ ಕೆಲಸದಾಕೆಯನ್ನು ಬಂಧಿಸಿದ್ದು, ಆಕೆಯಿಂದ ₹10 ಲಕ್ಷ ಮೌಲ್ಯದ 113 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ನಗರ ಪೊಲೀಸರು, ಎಲ್ಲ ನಾಗರಿಕರಿಗೆ ಮನೆಗೆಲಸಗಾರರನ್ನು ನೇಮಿಸಿಕೊಳ್ಳುವ ಮುನ್ನ ಅವರ ಹಿನ್ನೆಲೆಯನ್ನು ಪರಿಶೀಲಿಸಲು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ನಾಗರೀಕರಲ್ಲಿ ಮನವಿ ಮಾಡಿದ್ದಾರೆ.

ಹೆಚ್.ಎಸ್.ಆರ್. ಲೇಔಟ್ ಪೊಲೀಸ್ ಠಾಣೆಯ ಸಿಬ್ಬಂದಿ, ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಳವು ಪ್ರಕರಣದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ ₹3 ಲಕ್ಷ ಮೌಲ್ಯದ, 03 ಕೆಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನಗರ ಪೊಲೀಸರು, ನಗರದ ವ್ಯಾಪಾರಿ ಮಾಲೀಕರಿಗೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡುತ್ತಾರೆ. ಕೆಲಸಗಾರರ ವೈಯಕ್ತಿಕ ಹಿನ್ನೆಲೆಯ ಪರಿಶೀಲನೆ, ಕಣ್ಗಾವಲು ವ್ಯವಸ್ಥೆಗಳ ಅಳವಡಿಕೆ, ಮತ್ತು ಬೆಲೆಬಾಳುವ ವಸ್ತುಗಳಿರುವ ಪ್ರದೇಶಗಳಿಗೆ ನಿರ್ಬಂಧಿಸುವಿಕೆಯಂತಹ ಕ್ರಮಗಳು ಅತ್ಯವಶ್ಯ ಎಂದು ಸೂಚಿಸಿದ್ದಾರೆ.

Ramesh Babu

Journalist

Recent Posts

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

6 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

12 hours ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

23 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

23 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

1 day ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

1 day ago