ವಿವಿಧ‌ ಪ್ರಕರಣ ಭೇದಿಸಿದ ಪೊಲೀಸರು: ಅಪಾರ ಮೌಲ್ಯದ ನಗ, ನಗದು ವಶ

ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಚಿನ್ನಾಭರಣ ಮತ್ತು ನಗದು ಕಳವು ಆರೋಪದಡಿ ಮನೆಕೆಲಸದಾಕೆಯನ್ನು ಬಂಧಿಸಿದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು. ಆರೋಪಿತೆಯಿಂದ ಒಟ್ಟು 48.62 ಗ್ರಾಂ ಚಿನ್ನಾಭರಣ ಮತ್ತು ₹3.86 ಲಕ್ಷ ನಗದು ಸೇರಿದಂತೆ, ಒಟ್ಟು ₹8.47 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.  ನಾಗರಿಕರು, ಮನೆಕೆಲಸಗಾರರನ್ನು ನೇಮಕ ಮಾಡಿಕೊಳ್ಳುವ ಮುನ್ನ ಅವರ ಹಿನ್ನೆಲೆಯನ್ನು ತಪ್ಪದೇ ಪರಿಶೀಲಿಸಬೇಕು. ಹಾಗೂ ಬೆಲೆ ಬಾಳುವ ವಸ್ತುಗಳನ್ನು ಮನೆಯಲ್ಲಿ ಸುರಕ್ಷಿತವಾಗಿ ಇಡುವ ಬಗ್ಗೆ ಎಚ್ಚರಿಕೆ ವಹಿಸುವಂತೆ ನಗರ ಪೊಲೀಸ್ ಕೋರಿದೆ ಎಂದರು.

ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನದ ಆರೋಪದಡಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ 148 ಗ್ರಾಂ ಚಿನ್ನಾಭರಣ ಹಾಗೂ 200 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಒಟ್ಟು ಮೌಲ್ಯ ₹9.20 ಲಕ್ಷ. ನಗರ ಪೊಲೀಸರು, ನಾಗರಿಕರಿಗೆ ತಮ್ಮ ಮನೆಗಳಿಗೆ ಭದ್ರವಾದ ಲಾಕಿಂಗ್ ವ್ಯವಸ್ಥೆ ಅಳವಡಿಸಲು ಹಾಗೂ ಕೀಲಿ-ಅಡಗಿಸುವ ಸ್ಥಳಗಳ ಬಳಕೆ ಮಾಡದಂತೆ ವಿನಂತಿಸಿದ್ದಾರೆ.

ಇದೇ ರೀತಿ, ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವಿದೇಶಿ ಪ್ರಜೆಯೊಬ್ಬನನ್ನು ಅಡ್ಡಗಟ್ಟಿ,  ಮಾರಕಾಸ್ತ್ರ ತೋರಿಸಿ ಆತನ ಬಳಿ ಇದ್ದ ನಗದು ಹಣ, ಪಾಸ್‌ಪೋರ್ಟ್, ಇತರೆ ದಾಖಲೆಗಳಿದ್ದ ಬ್ಯಾಗ್ ಮತ್ತು ಸ್ಕೂಟರ್ ಗಳನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 2 ದ್ವಿಚಕ್ರ ವಾಹನಗಳು, ₹86,000 ನಗದು, ಪಾಸ್‌ಪೋರ್ಟ್ ಮತ್ತು ಇತರೆ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹1.60 ಲಕ್ಷವಾಗಿದೆ. ಪೊಲೀಸರು ನಗರದ ನಾಗರಿಕರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಮೊತ್ತದ ನಗದು ಅಥವಾ ಮಹತ್ವದ ದಾಖಲೆಗಳನ್ನು ಒಯ್ಯುವಾಗ ಹೆಚ್ಚಿನ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ.

ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಮಾಲೀಕರ ಮನೆಯಿಂದ ನಗದು ಕಳವು ಮಾಡಿದ್ದ ಕಾರು ಚಾಲಕನನ್ನು ಬಂಧಿಸಿದ್ದು, ಆರೋಪಿಯಿಂದ ₹1,48,36,500 ನಗದು ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಾಹನ ಚಾಲಕರನ್ನು ನೇಮಕ ಮಾಡುವ ಮೊದಲು, ಅವರ ಹಿನ್ನೆಲೆಯ ಪರಿಶೀಲನೆ, ನಗದನ್ನು ಸುರಕ್ಷಿತವಾಗಿ ಇಡುವಂತ ಕ್ರಮಗಳ ಅಳವಡಿಕೆ ಅತ್ಯಗತ್ಯ ಎಂದು ಎಚ್ಚರಿಸಿದ್ದಾರೆ.

ಹೆಚ್.ಎಸ್.ಆರ್. ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳ ಕಳ್ಳತನದ ಆರೋಪದ ಮೇಲೆ, ಮನೆ ಕೆಲಸದಾಕೆಯನ್ನು ಬಂಧಿಸಿದ್ದು, ಆಕೆಯಿಂದ ₹10 ಲಕ್ಷ ಮೌಲ್ಯದ 113 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ನಗರ ಪೊಲೀಸರು, ಎಲ್ಲ ನಾಗರಿಕರಿಗೆ ಮನೆಗೆಲಸಗಾರರನ್ನು ನೇಮಿಸಿಕೊಳ್ಳುವ ಮುನ್ನ ಅವರ ಹಿನ್ನೆಲೆಯನ್ನು ಪರಿಶೀಲಿಸಲು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ನಾಗರೀಕರಲ್ಲಿ ಮನವಿ ಮಾಡಿದ್ದಾರೆ.

ಹೆಚ್.ಎಸ್.ಆರ್. ಲೇಔಟ್ ಪೊಲೀಸ್ ಠಾಣೆಯ ಸಿಬ್ಬಂದಿ, ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಕಳವು ಪ್ರಕರಣದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ ₹3 ಲಕ್ಷ ಮೌಲ್ಯದ, 03 ಕೆಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನಗರ ಪೊಲೀಸರು, ನಗರದ ವ್ಯಾಪಾರಿ ಮಾಲೀಕರಿಗೆ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡುತ್ತಾರೆ. ಕೆಲಸಗಾರರ ವೈಯಕ್ತಿಕ ಹಿನ್ನೆಲೆಯ ಪರಿಶೀಲನೆ, ಕಣ್ಗಾವಲು ವ್ಯವಸ್ಥೆಗಳ ಅಳವಡಿಕೆ, ಮತ್ತು ಬೆಲೆಬಾಳುವ ವಸ್ತುಗಳಿರುವ ಪ್ರದೇಶಗಳಿಗೆ ನಿರ್ಬಂಧಿಸುವಿಕೆಯಂತಹ ಕ್ರಮಗಳು ಅತ್ಯವಶ್ಯ ಎಂದು ಸೂಚಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

6 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

7 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

8 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

9 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

16 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago