ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಧರಣಿ: ಸರ್ಕಾರ ಶೀಘ್ರವಾಗಿ ಸಮಸ್ಯೆಯನ್ನು ಇತ್ಯಾರ್ಥಪಡಿಸುವಂತೆ ಭಾ.ವಿ.ಪ ಮನವಿ

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ವಿವಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ತರಗತಿಗಳಲ್ಲಿ ಪಾಠಗಳು ನಡೆಯದೆ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗುವಂತಾಗಿದೆ. ಸರ್ಕಾರ ಶೀಘ್ರವಾಗಿ ಸಮಸ್ಯೆಯನ್ನು ಇತ್ಯಾರ್ಥ ಪಡಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಗ್ರೇಡ್-2 ತಹಶೀಲ್ದಾರ್ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಣಿ ಸದಸ್ಯ ಎಸ್.ದರ್ಶನ್ ಕುಮಾರ್, ಕಾರ್ಯರ್ಶಿ ವಿ.ಆಕಾಶ್, ಎರಡು ವಾರಗಳಿಂದಲು ಅತಿಥಿ ಉಪನ್ಯಾಸಕರು ತಗತಿಗಳಿಂದ ಹೊರಗುಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗಿಂತಲು ಅತಿಥಿ ಉಪನ್ಯಾಸಕರ ಸಂಖ್ಯೆಯೇ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಉಪನ್ಯಾಸಕರ ಬೇಡಿಕೆಗಳ ಕುರಿತಂತೆ ಸರ್ಕಾರ ತುರ್ತು ಕ್ರಮ ಕೈಗೊಂಡು ತರಗತಿಗಳು ಸುಸೂತ್ರವಾಗಿ ನಡೆಯುವಂತೆ ಮಾಡಬೇಕಿದೆ.

ಸರ್ಕಾರಿ ಪದವಿ ಕಾಲೇಜುಗಳಿಗೆ ಸಾಮಾನ್ಯವಾಗಿ ಗ್ರಾಮೀಣ ಭಾಗದ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ  ವಿದ್ಯಾರ್ಥಿಗಳೇ ಹೆಚ್ಚಾಗಿ ಬರುವುದು. ವಾಸ್ತವ ಸ್ಥಿತಿ ಈಗಿರುವಾಗ ವಿದ್ಯಾರ್ಥಿಗಳು ಪಾಠ ಕೇಳುವಂದರಿಂದ ವಂಚಿತರಾಗುವಂತೆ ಆಗಲಿದೆ ಎಂದರು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾದ ಲಕ್ಷ್ಮೀಪತಿ, ಕುಶಾಲ್‌ ಸೇರಿದಂತೆ ಇತರರು  ಇದ್ದರು.

Ramesh Babu

Journalist

Recent Posts

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

31 minutes ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

14 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

14 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

14 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

14 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

17 hours ago